Webdunia - Bharat's app for daily news and videos

Install App

ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ

Webdunia
ಮಂಗಳವಾರ, 7 ಸೆಪ್ಟಂಬರ್ 2021 (19:04 IST)
‘ಅಡುಗೆ ಅನಿಲ, ಅಡುಗೆ ಎಣ್ಣೆ, ದಿನಸಿ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಗೃಹಿಣಿಯರು ಹಾಗೂ ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದ ಈ ಜನ ವಿರೋಧಿ ನೀತಿ ಖಂಡಿಸಿ ಬುಧವಾರ ರಾಜ್ಯಾದ್ಯಂತ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಹಾಗೂ ರಾಜಭವನ ಚಲೋ ನಡೆಸಿ ಸರ್ಕಾರದ ನೀತಿ ವಿರುದ್ಧ ರಾಜ್ಯಪಾಲರ ಸುಖಾಂತರ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು’ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ತಿಳಿಸಿದ್ದಾರೆ.
 
ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಸಣ್ಣ ಪುಟ್ಟ ಬೆಲೆ ಏರಿಕೆಗೂ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ನಾಯಕಿಯರಾದ ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಅವರು ಈಗ ಯಾಕೆ ಮೌನವಾಗಿದ್ದಾರೆ?’ ಎಂದು ಪ್ರಶ್ನಿಸಿದರು.
 
‘ಬಿಜೆಪಿಯಲ್ಲಿರುವ ಶೋಭಕ್ಕ, ತಾರಕ್ಕ, ಮಾಳವಿಕಾ ಅಕ್ಕ, ಶಶಿಕಲಾ ಜೊಲ್ಲೆ ಅವರಿಗೆ ಈ ಬೆಲೆ ಏರಿಕೆ ಕಾಣಿಸುತ್ತಿಲ್ಲವೇ? ಮಧ್ಯಮ ವರ್ಗದ ಹೆಣ್ಣುಮಕ್ಕಳ ಕಣ್ಣೀರ ಕೂಗು ನಿಮಗೆ ಕೇಳಿಸುತ್ತಿಲ್ಲವೇ? ಅಧಿಕಾರ ಸಿಕ್ಕ ಮೇಲೆ ನೈತಿಕತೆಯೇ ಕಳೆದುಹೋಗಿದೆಯಾ? ಕೋವಿಡ್ ಸಮಯದಲ್ಲಿ ಜನರು ಈ ಬೆಲೆ ಏರಿಕೆ ನಿಭಾಯಿಸಲು ಸಾಧ್ಯವಾ? ಜನರ ಕಷ್ಟ ನಿಮಗೆ ಕಾಣುತ್ತಿಲ್ಲವೇ?. ನಾನು ಮೋದಿ ಅವರ ಬಗ್ಗೆ ಮಾತನಾಡುವುದಿಲ್ಲ, ಅವರಿಗೆ  56 ಇಂಚಿನ ಎದೆಯಲ್ಲಿ ಹೆಣ್ಣಿ ಹೃದಯವಿಲ್ಲ. ಹೀಗಾಗಿ ಬಿಜೆಪಿ ಮಹಿಳಾ ನಾಯಕಿಯರನ್ನು ಪ್ರಶ್ನೆ ಮಾಡುತ್ತಿದ್ದೇನೆ’ ಎಂದರು.
 
‘ಯುಪಿಎ ಅವಧಿಯಲ್ಲಿ ಅಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುತ್ತಿತ್ತು, ಆದರೆ ಈಗ ಒಂದು ಬಾರಿಗೆ 25ರಿಂದ  50 ರೂಪಾಯಿವರೆಗೂ ಅಡುಗೆ ಅನಿಲದ ಬೆಲೆ ಏರಿಕೆಯಾಗುತ್ತಿದೆ. ಏಷ್ಟೇ ಬೆಲೆ ಹೆಚ್ಚಿಸಿದರೂ ಜನ ತೆಗೆದುಕೊಳ್ಳುತ್ತಾರೆ, ಯಾರೂ ಪ್ರಶ್ನೆ ಮಾಡುವುದಿಲ್ಲ ಎಂಬ ಮನಸ್ಥಿತಿಗೆ ಬಿಜೆಪಿ ನಾಯಕರು ಬಂದಿದ್ದಾರೆ. 2014ರಲ್ಲಿ 410 ರೂಪಾಯಿ ಇದ್ದ ಅಡುಗೆ ಅನಿಲ, ಕಳೆದ 7 ವರ್ಷಗಳಲ್ಲಿ 27 ಬಾರಿ ಏರಿಕೆ ಕಂಡು ಇಂದು 880 ರೂಪಾಯಿ ಆಗಿದೆ. ಸದ್ಯದಲ್ಲೇ ಸಾವಿರದ ಗಡಿ ಮುಟ್ಟಿದರೆ ಆಶ್ಚರ್ಯವಿಲ್ಲ’ ಎಂದರು.
 
‘ಕೇವಲ ಅಡುಗೆ ಅನಿಲ ಮಾತ್ರವಲ್ಲ, ದಿನಸಿ ಸಾಮಾಗ್ರಿ, ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಾಗುತ್ತಿದೆ. ಈ ಮಧ್ಯೆ ಬಿಜೆಪಿ ನಾಯಕರೊಬ್ಬರು ಈ ಬೆಲೆ ಏರಿಕೆಗೆ ತಾಲಿಬಾನ್ ಸರ್ಕಾರ ಕಾರಣ ಎಂಬ ಬಾಲಿಷ ಹೇಳಿಕೆ ನೀಡುತ್ತಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ದೇಶವನ್ನು ಕಟ್ಟದಿದ್ದರೆ ಇಂದು ನಾವ್ಯಾರೂ ಹೀಗೆ ಕೂರಲು ಸಾಧ್ಯವಾಗುತ್ತಿರಲಿಲ್ಲ’ ಎಂದರು.
 
‘ಉಜ್ವಲ ಯೋಜನೆಯಲ್ಲಿ 8 ಕೋಟಿಗೂ ಹೆಚ್ಚು ಮಹಿಳೆಯರಿಗೆ ಉಚಿತ ಗ್ಯಾಸ್ ಕೊಟ್ಟಿದ್ದೇವೆ ಎಂದು ಹೇಳಿಕೊಳ್ಳುತ್ತೀರ. ಈ ಬೆಲೆ ಏರಿಕೆಯಿಂದ ಅವರಿಗೆ ಅನ್ಯಾಯವಾಗುತ್ತಿಲ್ಲವೇ? ಒಂದೂವರೆ ವರ್ಷದಿಂದ ಸಬ್ಸಿಡಿ ಸಿಗುತ್ತಿಲ್ಲ. ಅವೈಜ್ಞಾನಿಕ ತೆರಿಗೆ ಮೂಲಕ ಬೆಲೆ ಏರಿಕೆ ಮಾಡುತ್ತಿದ್ದಾರೆ’ ಎಂದರು.
 
‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ ಅವರ ಮಾರ್ಗದರ್ಶನದ ಮೇರೆಗೆ ಬುಧವಾರ ಇಡೀ ರಾಜ್ಯದೆಲ್ಲೆಡೆ ಏಕ ಕಾಲಕ್ಕೆ ಬಿಜೆಪಿ ಸರ್ಕಾರದ  ವಿರುದ್ಧ ಮಹಿಳಾ ಕಾಂಗ್ರೆಸ್ ಹೋರಾಟ ಮಾಡಲಿದೆ. ನಾಳೆ ರಾಜಭವನ ಮುತ್ತಿಗೆ ಹಾಕಲು ಮುಂದಾಗುತ್ತೇವೆ. ರಾಜ್ಯಪಾಲರು, ರಾಷ್ಟ್ರಪತಿಗಳು ಜವಾಬ್ದಾರಿಯುತ ಸ್ಥಾನದಲ್ಲಿದ್ದು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರಾ? ಅಥವಾ ನಿದ್ರೆ ಮಾಡುತ್ತಿದ್ದಾರಾ?’ ಎಂದು ಪ್ರಶ್ನಿಸಿದರು.
 
‘ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ, ತಾಲೂಕು ಕೇಂದ್ರಗಳಲ್ಲಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು’ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments