Webdunia - Bharat's app for daily news and videos

Install App

ಬಿಜೆಪಿ ಶಾಸಕನ ಜೊತೆ ಕೈ ಕೈ ಮಿಲಾಯಿಸಿದ ರಾಜಾಹುಲಿ

Webdunia
ಶುಕ್ರವಾರ, 17 ಜನವರಿ 2020 (15:17 IST)
ಬಿಜೆಪಿ ನೂತನ ಶಾಸಕರೊಬ್ಬರ ಜೊತೆ ರಾಜಾಹುಲಿ ಕೈಕೈ ಮಿಲಾಯಿಸೋಕೆ ಮುಂದಾಗಿದ್ದ ಘಟನೆ ನಡೆದಿದೆ ಎನ್ನಲಾಗಿದೆ.  

ಮಂಡ್ಯದ ಗವಿರಂಗನಾಥಸ್ವಾಮಿ ಕ್ಷೇತ್ರದಲ್ಲಿ ನಡೆದ ರಥೋತ್ಸವದ ಸಂದರ್ಭದಲ್ಲಿ ನನಗೇ ಮೊದಲ ಪೂಜೆ ನೀಡಬೇಕು. ಹೀಗಂತ ಶಾಸಕ ನಾರಾಯಣಗೌಡ ಹಾಗೂ ತಹಶೀಲ್ದಾರ್ ಎಂ. ಶಿವಮೂರ್ತಿ ಅವರ ವಿರುದ್ಧ ವಾಗ್ಯುದ್ಧ ನಡೆಸಿದ್ದಾರೆ ತಾಲ್ಲೂಕು ಪಂಚಾಯತಿ ಸದಸ್ಯ ರಾಜಾಹುಲಿ ದಿನೇಶ್.

ಈ ಸಂದರ್ಭದಲ್ಲಿ ರಾಜಾಹುಲಿ ಬೆಂಬಲಿಗರು ಹಾಗೂ ಶಾಸಕ ನಾರಾಯಣಗೌಡರ ಬೆಂಬಲಿಗರ ನಡುವೆ ಮಾತಿನ ಚಕಮಕಿ, ಆರೋಪ ಪ್ರತ್ಯಾರೋಪಗಳು ನಡೆದಿವೆ.

ತಕ್ಷಣವೇ ಮಧ್ಯ ಪ್ರವೇಶಿಸಿದ ಪಟ್ಟಣ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ, ಗಲಾಟೆಯನ್ನು ನಿಯಂತ್ರಿಸಿದ್ದಾರೆ. ಕೈಕೈ ಮಿಲಾಯಿಸುವ ಹಂತ ತಲುಪಿದ್ದ ಯುವಕರ ಗುಂಪನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಶಾಸಕ ನಾರಾಯಣಗೌಡರಿಗೆ ಮೊದಲ ಪೂಜೆಯನ್ನು ಕೊಡಬಾರದು. ಕ್ಷೇತ್ರದ ತಾಲ್ಲೂಕು ಪಂಚಾಯತಿ ಸದಸ್ಯನಾದ ನನಗೆ ಮೊದಲ ಪೂಜೆ ನೀಡಬೇಕು. ಹೀಗಂತ ಆಗ್ರಹಿಸಿ ಗದ್ದಲ ನಡೆಸಿ ಗಲಾಟೆಗೆ ಮುಂದಾದ ರಾಜಾಹುಲಿ ದಿನೇಶ್ ಮತ್ತು ಅವರ ಬೆಂಬಲಿಗರನ್ನು ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ದೇವಾಲಯದ ಆವರಣದಿಂದ ಹೊರಗೆ ಕಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments