ಸಚಿವ ಸ್ಥಾನ ಕಳೆದುಕೊಂಡ ರಾಜಣ್ಣ ನೂರಕ್ಕೆ ನೂರರಷ್ಟು ಬಿಜೆಪಿ ಸೇರುತ್ತಾರೆ: ಶಾಸಕ ಬಾಲಕೃಷ್ಣ ಹೊಸ ಬಾಂಬ್‌

Sampriya
ಮಂಗಳವಾರ, 2 ಸೆಪ್ಟಂಬರ್ 2025 (19:47 IST)
ಬೆಂಗಳೂರು:  ಸಚಿವ ಸ್ಥಾನದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ ಅವರು ಬಿಜೆಪಿಗೆ ಅರ್ಜಿ ಹಾಕಿದ್ದು, ನೂರಕ್ಕೆ ನೂರರಷ್ಟು ಅವರು ಬಿಜೆಪಿ ಸೇರುತ್ತಾರೆ ಎಂದು ದು ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಹೊಸ ಬಾಂಬ್‌ ಸಿಡಿಸಿದ್ದಾರೆ.

ರಾಜಣ್ಣ ಅವರು ಸಚಿವ ಸ್ಥಾನ ಕಳೆದುಕೊಂಡಿದ್ದರ ಹಿಂದೆ ಯಾರ ಷಡ್ಯಂತ್ರವೂ‌ ಇಲ್ಲ. ‌ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ರಾಜಣ್ಣ ವಜಾಗೊಂಡಿದ್ದಾರೆ. ತಮ್ಮ ಮಾತಿನಿಂದಲೇ ಕೆಟ್ಟಿದ್ದಾರೆ. ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಟಿದರು.

ಸಚಿವರಾಗಿದ್ದಾಗ ರಾಜಣ್ಣ ಹೇಗೆ ನಡೆದುಕೊಂಡರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಮಾತುಗಳು, ಮಾತು ಮನೆ ಕೆಡಿಸಿತು, ತೂತು ಒಲೆ ಕೆಡಿಸಿತು ಎಂಬಂತಿದ್ದವು ಎಂದು ಲೇವಡಿ ಮಾಡಿದರು.

ರಾಜಣ್ಣ ಈಗ ಪಕ್ಷ ತ್ಯಜಿಸಲು ಬೇಕೆಂದೇ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ದೆಹಲಿಯಲ್ಲಿ ಸಮಾವೇಶ ಮಾಡಲು ಮುಂದಾಗಿರುವ ಅವರು, ಅದೇನು ಮಾಡುತ್ತಾರೊ ಮಾಡಲಿ. ಅವರು ಬಿಜೆಪಿಗೆ ಹೋಗುತ್ತಿದ್ದಾರೊ ಇಲ್ಲವೊ ಎಂಬುದನ್ನು ಅವರನ್ನೇ ಕೇಳಿ. ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಿದ್ರೆ ಎಲ್ಲವೂ ಗೊತ್ತಾಗುತ್ತದೆ ಎಂದು ಹೇಳಿದರು.

ನಮ್ಮ ಸರ್ಕಾರ ಇಲ್ಲದಿದ್ದಿದ್ದರೆ ಇಷ್ಟೊತ್ತಿಗಾಗಲೇ ಬಿಜೆಪಿಯಲ್ಲಿ ಇರುತ್ತಿದ್ದರು. ಈಗ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿರುವ ರಾಜಣ್ಣ, ಆ ಪಕ್ಷದ ಕೇಂದ್ರ ಮತ್ತು ರಾಜ್ಯ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಎಂದರು.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಲ ಕೆರೆಯಲ್ಲಿ, ತೆನೆ ಹೊಲದಲ್ಲಿದ್ದರೆ ಚೆಂದ: ಡಿಕೆ ಶಿವಕುಮಾರ್‌

ಆಹಾರ ಅರಸಿ ಬಂದ ಕಾಡಾನೆಗಳು ಹಾರೋಬೆಲೆ ಡ್ಯಾಂನಲ್ಲಿ ಮುಳುಗಿ ಸಾವು

ಮಲೆನಾಡು ಜನರ ಪ್ರೀತಿಯ ಕಾಡಾನೆ ಭೀಮಾನಿಗೆ ಹೀಗಾಗುದಾ

ಮುಸ್ಲಿಮರು, ಕ್ರಿಶ್ಚಿಯನ್ನರು ಆರ್‌ಎಸ್‌ಎಸ್‌ ಸೇರಬಹುದಾ ಪ್ರಶ್ನೆಗೆ ಮೋಹನ್ ಭಾಗವತ್ ಉತ್ತರ ಹೀಗಿದೆ

ಹಾಸಿಗೆಗಾಗಿ ದರ್ಶನ್‌ ಕೋರ್ಟ್‌ಗೆ ಹೋಗುವಾಗ ಕೆಲ ಕೈದಿಗಳಿಗೆ ರಾಜಾತಿಥ್ಯ: ಕೆರಳಿ ಕೆಂಡವಾದ ಪರಮೇಶ್ವರ್‌

ಮುಂದಿನ ಸುದ್ದಿ
Show comments