Select Your Language

Notifications

webdunia
webdunia
webdunia
webdunia

ಪರಮೇಶ್ವರ್‌ಗೆ ಸಚಿವ ಸ್ಥಾನ: ರಾಜಶೇಖರನ್ ಒತ್ತಾಯ

ಪರಮೇಶ್ವರ್‌ಗೆ ಸಚಿವ ಸ್ಥಾನ: ರಾಜಶೇಖರನ್ ಒತ್ತಾಯ
ಬೆಂಗಳೂರು , ಬುಧವಾರ, 21 ಮೇ 2014 (14:47 IST)
ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು  ಎಂಎಲ್‌ಸಿ ಎಂ.ವಿ.ರಾಜಶೇಖರನ್ ಬೆಂಗಳೂರಿನಲ್ಲಿ ಒತ್ತಾಯಿಸಿದ್ದಾರೆ.  ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಅವರು ಒತ್ತಾಯಿಸಿದರು.

ಚುನಾವಣೆಗೆ ಮುನ್ನವೇ ಸಚಿವ ಸ್ಥಾನವನ್ನು ಕಲ್ಪಿಸಬೇಕಾಗಿತ್ತು. ಈಗಾದಲೂ ಸಚಿವ ಸ್ಥಾನ ನೀಡಬೇಕೆಂದು ಅವರು ಒತ್ತಾಯಿಸಿದರು. ಪರಮೇಶ್ವರ್ ಈ ಸಂದರ್ಭದಲ್ಲಿ ಮಾತನಾಡಿ, ಈಗ ನಾವು ಪಕ್ಷ ಕಟ್ಟುವ ಕೆಲಸ ಮಾಡಬೇಕಿದೆ.

ಸಂಪುಟ ಸೇರ್ಪಡೆ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ ಎಂದು ನುಡಿದರು. ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. 

Share this Story:

Follow Webdunia kannada