Webdunia - Bharat's app for daily news and videos

Install App

ರಾಜಸ್ತಾನ ಸಚಿವರಿಗೆ ಅನಾಮಧೇಯ ಮೇಲ್: ಸ್ಫೋಟದ ಬೆದರಿಕೆ

Webdunia
ಶುಕ್ರವಾರ, 26 ಡಿಸೆಂಬರ್ 2014 (14:43 IST)
ಇಲ್ಲಿನ ರಾಜ್ಯ ಸರ್ಕಾರದ ಹಾಲಿ ಸಚಿವರೋರ್ವರಿಗೆ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದನಾ ಸಂಘಟನೆಯ ಉಗ್ರರಿಂದ ಅನಾಮಧೇಯ ಇ-ಮೇಲ್ ಕರೆಯೊಂದು ಬಂದಿದ್ದು, ಗಣರಾಜ್ಯ ದಿನೋತ್ಸವವಾದ ಜನವರಿ 26 ರಂದು ರಾಜಧಾನಿ ದೆಹಲಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.
 
ಈ ಬಗ್ಗೆ ಸ್ವತಃ ಸಚಿವರೇ ಪ್ರತಿಕ್ರಿಯಿಸಿದ್ದು, ಈ ಮೇಲ್‌ನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಕಾರ್ಯಾಕರ್ತರೇ ಕಳುಹಿಸಿದ್ದಾರೆ ಎಂದಿದ್ದು, ಈ ಬಗ್ಗೆ ಪೊಲೀಸರೂ ಕೂಡ ತನಿಖೆ ನಡೆಸಿ ಖಚಿತಪಡಿಸಿದ್ದಾರೆ. 
 
ಇತ್ತೀಚೆಗೆ ದೇಶದೆಲ್ಲೆಡೆ ಉಗ್ರರ ಅಟ್ಟಹಾಸ ಹೆಚ್ಚುತ್ತಿದ್ದು, ಗಣರಾಜ್ಯೋತ್ಸವವನ್ನೇ ಗುರಿಯಾಗಿಸಿಕೊಂಡು ಈ ಬೆದರಿಕೆ ಹಾಕಲಾಗಿದ್ದು, ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಲವು ಗಣ್ಯ ನಾಯಕರನ್ನು ಹತ್ಯೆಗೈಯ್ಯುವ ವ್ಯವಸ್ಥಿತ ಸಂಚು ಇದಾಗಿದೆ. ಈ ಕರೆಯ ಪ್ರಮುಖ ಉದ್ದೇಶ ಗಣರಾಜ್ಯೋತ್ವಕ್ಕೆ ವಿಶ್ವದ ದೊಡ್ಡಣ್ಣನಾಗಿ ಮೆರೆಯುತ್ತಿರುವ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿದ್ದು, ಒಬಾಮರನ್ನೇ ಹತ್ಯೆಗೈಯ್ಯುವ ಸಂಚನ್ನು ಉಗ್ರರು ರೂಪಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments