Select Your Language

Notifications

webdunia
webdunia
webdunia
webdunia

ರಾಮನಗರದಲ್ಲಿ ಕೊನೆಗೂ ತಲೆ ಎತ್ತುತ್ತಿದೆ ರಾಜೀವ್ ಗಾಂಧಿ ಆರೋಗ್ಯ ವಿವಿ

ರಾಮನಗರದಲ್ಲಿ ಕೊನೆಗೂ ತಲೆ ಎತ್ತುತ್ತಿದೆ ರಾಜೀವ್ ಗಾಂಧಿ ಆರೋಗ್ಯ ವಿವಿ
ಬೆಂಗಳೂರು , ಗುರುವಾರ, 21 ಮೇ 2015 (16:04 IST)
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಜೀವ್ ಗಾಂಧಿ ಆರೋಗ್ಯ ವಿವಿ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಅಂತಿಮ ನಿರ್ಧಾರಕ್ಕೆ ಬಂದಿದ್ದು, ವಿಶ್ವವಿದ್ಯಾಲಯವು ರಾಮನಗರದಲ್ಲಿ ತಲೆ ಎತ್ತಲಿದೆ ಎಂದು ತಿಳಿಸಿದ್ದಾರೆ.
 
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಕರೆಯಲಾಗಿದ್ದ ರಾಮನಗರ ಜಿಲ್ಲೆಯ ಹಲವು ಯೋಜನೆಗಳ ಸಮಾಲೋಚನಾ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ವಿಶ್ವವಿದ್ಯಾಲಯವು ಜಿಲ್ಲೆಯಲ್ಲಿ ಅಂತಿಮವಾಗಿ ತಲೆ ಎತ್ತುತ್ತಿದ್ದು, 112 ಎಕರೆ ಜಾಗದಲ್ಲಿ ನಿರ್ಮಾಣವಾಗಲಿದೆ. 
 
ಸಿಎಂ ನೇತೃತ್ವದ ಈ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ, ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ.ಯೋಗೀಶ್ವರ್ ಅವರನ್ನು ಹೊರತು ಪಡಿಸಿ ಜಿಲ್ಲೆಯ ಎಲ್ಲಾ ಪಕ್ಷಗಳ ಶಾಸಕರು ಭಾಗಿಯಾಗಿದ್ದರು. ಈ ಇಬ್ಬರು ನಾಯಕರ ಗೈರು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ವೇಳೆ ಈ ನಿರ್ಧಾರ ಕೈಗೊಳ್ಳಲಾಯಿತು.

Share this Story:

Follow Webdunia kannada