Webdunia - Bharat's app for daily news and videos

Install App

ರಾಜೀವ್ ಚಂದ್ರಶೇಖರ್ ಗೆಲುವು ನಿಶ್ಚಿತ: ಬಿಎಸ್ ವೈ

Webdunia
ಶುಕ್ರವಾರ, 23 ಮಾರ್ಚ್ 2018 (16:27 IST)
ರಾಜ್ಯಸಭಾ ಚುನಾವಣೆಯಲ್ಲಿ 50 ಕ್ಕೂ ಹೆಚ್ಚು ಜನ ಶಾಸಕರ ಬೆಂಬಲವಿರುವುದರಿಂದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರು ಗೆಲುವು ಸಾಧಿಸುತ್ತಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಸಚಿವ ಎಂ.ಬಿ.ಪಾಟೀಲ್ ವಿರುದ್ದ ಮತ್ತೆ ಹರಿಹಾಯ್ದಿದ್ದಾರೆ. ಎಂ.ಬಿ ಪಾಟೀಲ್‌ಗೆ ನೇರವಾಗಿ ಕೇಳಲು ಬಯಸುತ್ತೇನೆ, ಕಾಮಗಾರಿ ಗುತ್ತಿಗೆ ನೀಡಿರುವುದರಲ್ಲಿ ಅವ್ಯವಹಾರ ನಡೆದಿರುವುದು ಸತ್ಯ. ನಾನು ಕೊಟ್ಟಿರುವ ದಾಖಲೆಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಿದ್ದರೆ ಅವರು ಹೇಳಿದಂತೆ ಕೇಳಲು ನಾನು ಸಿದ್ಧನಿದ್ದೇನೆ ಎಂದು ಬಿ.ಎಸ್.ವೈ ಸವಾಲು ಹಾಕಿದರು.
 
ಹೊರರಾಜ್ಯದಿಂದ ಫೇಕ್ ಸರ್ಟಿಫಿಕೇಟ್ ಗಳನ್ನು ತಂದು ಕಾಮಗಾರಿ ಮಾಡಿದ್ದೇನೆ ಎಂದು ಏಜೆನ್ಸಿಯವರು ಅಪ್ಲೈ ಮಾಡಿದ್ದರು. ಅದಕ್ಕೆ ಅನುಮತಿ ನೀಡಲಾಗಿತ್ತು. ನಾವು ಅದಕ್ಕೆ ಆಕ್ಷೇಪ ಮಾಡಿದ ಮೇಲೆ ಎರಡು ದಿನಗಳ ಹಿಂದೆ ವಿತ್ ಡ್ರಾ ಮಾಡಿದ್ದೇವೆ ಎಂದು ಹೇಳಿದ್ದಾರೆ. 25 ಕೋಟಿ ಕಮಿಷನ್ ಹೊಡೆದು ಕಾಮಗಾರಿ ಕೊಟ್ಟಿದ್ದಾರೆ ಎಂದು ಆರೋಪವನ್ನು ಪುನರುಚ್ಛರಿಸಿದರು. ಹೊರಗಡೆಯಿಂದ ಇಬ್ಬರನ್ನು ಕರೆದು ಇಷ್ಟು ದೊಡ್ಡ ಕಾಮಗಾರಿ ಕೊಟ್ಟಿರುವ ಉದ್ದೇಶವೇನು? ಎಂದು ಖಾರವಾಗಿ ಪ್ರಶ್ನಿಸಿದರು.
 
ಇದು ಅಕ್ಷಮ್ಯ ಅಪರಾಧವಾಗಿದ್ದು, ಕಮಿಷನ್ ತೆಗೆದುಕೊಂಡ ಮೇಲೆ ವರ್ಕ್ ಕೊಡಲಾಗಿತ್ತು, ಈಗ ದೊಂಬರಾಟ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು. ಈಗ ನನ್ನ ವಿರುದ್ದ ಅವಾಚ್ಯ ಪದ ಬಳಸಿ ಮಾತನಾಡುತ್ತಿರುವುದು ಅವರ ಯೋಗ್ಯತೆ ತಿಳಿಸುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments