Select Your Language

Notifications

webdunia
webdunia
webdunia
webdunia

ಮುಂದಿನ ವರ್ಷದಿಂದ ಸರ್ಕಾರದಿಂದಲೇ ಡಾ. ರಾಜ್ ಕುಮಾರ್ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯ

ಮುಂದಿನ ವರ್ಷದಿಂದ ಸರ್ಕಾರದಿಂದಲೇ ಡಾ. ರಾಜ್ ಕುಮಾರ್ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು , ಸೋಮವಾರ, 24 ಏಪ್ರಿಲ್ 2017 (23:08 IST)
ಮುಂದಿನ ವರ್ಷದಿಂದ ಸರ್ಕಾರದಿಂದಲೇ ಡಾ. ರಾಜ್ ಕುಮಾರ್ ಜಯಂತಿ ಆಚರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಈ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಸರ್ಕಾರದಿಂದ ರಾಜ್ ಕುಮಾರ್ ಜಯಂತಿ ಆಚರಿಸುವುದಾಗಿ ಪ್ರಕಟಿಸಿದರು.

ಬೆಳಗ್ಗೆಯಷ್ಟೇ ಗೃಹ ಸಚಿವ ಪರಮೇಶ್ವರ್ ರಾಜ್ ಕುಮಾರ್ ಅವರ ಜೀವನಚರಿತ್ರೆಯನ್ನ ಪಠ್ಯ ಪುಸ್ತಕದಲ್ಲಿ ಅಳವಡಿಸುವುದಾಗಿ ಘೋಷಿಸಿದ್ದರು. ರಾಜ್ ಕುಮಾರ್ ಅವರ 89ನೇ ಜನ್ಮದಿನವಾದ ಇಂದು ರಾಜ್ಯ ಸರ್ಕಾರ ಎರಡು ಐತಿಹಾಸಿಕ ಘೋಷಣೆಗಳ ಮೂಲಕ ಅಣ್ಣಾವ್ರಿಗೆ ಗೌರವ ಸಲ್ಲಿಸಿದೆ.

ಇತ್ತ, ಬೆಳಗ್ಗೆಯಿಂದ ರಾಜ್ಯದಲ್ಲಿ ಅಣ್ಣಾವ್ರ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯ್ತು. ಈ ಸಲದ ಅಣ್ಣಾವ್ರ ಹುಟ್ಟುಹಬ್ಬ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯ್ತು. ಗೂಗಲ್ ಡೂಡಲ್`ನಲ್ಲಿ ಅಣ್ಣಾವ್ರ ಬಣ್ಣದ ಚಿತ್ರ ಕಂಡು ಬಂತು. ರಾಜ್ ಕುಮಾರ್ ಸಮಾಧಿ ಬಳಿಯೇ ಶಿವಣ್ಣ ಅಭಿನಯದ ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಟೀಸರ್ ಬಿಡುಗಡೆ ಮಾಡಲಾಯ್ತು. ಕಠೀರೌ ಸ್ಟುಡಿಯೋದಲ್ಲಿರುವ ರಾಜ್ ಸ್ಮಾರಕದ ಬಳಿಗೆ ಬಂದ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ದೇಶಾದ್ಯಂತ ದನಕರುಗಳಿಗೆ ಆಧಾರ್ ರೀತಿಯ ನಂಬರ್