ಮುಂದಿನ ವರ್ಷದಿಂದ ಸರ್ಕಾರದಿಂದಲೇ ಡಾ. ರಾಜ್ ಕುಮಾರ್ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 24 ಏಪ್ರಿಲ್ 2017 (23:08 IST)
ಮುಂದಿನ ವರ್ಷದಿಂದ ಸರ್ಕಾರದಿಂದಲೇ ಡಾ. ರಾಜ್ ಕುಮಾರ್ ಜಯಂತಿ ಆಚರಿಸುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬೆಂಗಳೂರಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಿಎಂ ಈ ಘೋಷಣೆ ಮಾಡಿದ್ದಾರೆ. ಮುಂದಿನ ವರ್ಷದಿಂದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಸರ್ಕಾರದಿಂದ ರಾಜ್ ಕುಮಾರ್ ಜಯಂತಿ ಆಚರಿಸುವುದಾಗಿ ಪ್ರಕಟಿಸಿದರು.

ಬೆಳಗ್ಗೆಯಷ್ಟೇ ಗೃಹ ಸಚಿವ ಪರಮೇಶ್ವರ್ ರಾಜ್ ಕುಮಾರ್ ಅವರ ಜೀವನಚರಿತ್ರೆಯನ್ನ ಪಠ್ಯ ಪುಸ್ತಕದಲ್ಲಿ ಅಳವಡಿಸುವುದಾಗಿ ಘೋಷಿಸಿದ್ದರು. ರಾಜ್ ಕುಮಾರ್ ಅವರ 89ನೇ ಜನ್ಮದಿನವಾದ ಇಂದು ರಾಜ್ಯ ಸರ್ಕಾರ ಎರಡು ಐತಿಹಾಸಿಕ ಘೋಷಣೆಗಳ ಮೂಲಕ ಅಣ್ಣಾವ್ರಿಗೆ ಗೌರವ ಸಲ್ಲಿಸಿದೆ.

ಇತ್ತ, ಬೆಳಗ್ಗೆಯಿಂದ ರಾಜ್ಯದಲ್ಲಿ ಅಣ್ಣಾವ್ರ ಹುಟ್ಟುಹಬ್ಬವನ್ನ ಸಂಭ್ರಮದಿಂದ ಆಚರಿಸಲಾಯ್ತು. ಈ ಸಲದ ಅಣ್ಣಾವ್ರ ಹುಟ್ಟುಹಬ್ಬ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯ್ತು. ಗೂಗಲ್ ಡೂಡಲ್`ನಲ್ಲಿ ಅಣ್ಣಾವ್ರ ಬಣ್ಣದ ಚಿತ್ರ ಕಂಡು ಬಂತು. ರಾಜ್ ಕುಮಾರ್ ಸಮಾಧಿ ಬಳಿಯೇ ಶಿವಣ್ಣ ಅಭಿನಯದ ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಚಿತ್ರದ ಟೀಸರ್ ಬಿಡುಗಡೆ ಮಾಡಲಾಯ್ತು. ಕಠೀರೌ ಸ್ಟುಡಿಯೋದಲ್ಲಿರುವ ರಾಜ್ ಸ್ಮಾರಕದ ಬಳಿಗೆ ಬಂದ ಸಾವಿರಾರು ಅಭಿಮಾನಿಗಳು ನಮನ ಸಲ್ಲಿಸಿದರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments