Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕನಾಗಿದ್ದುಕೊಂಡು ಅಸಹಾಯಕತೆ ಪ್ರದರ್ಶಿಸಿದ ರಾಜು ಕಾಗೆ: ಬಿಜೆಪಿ ಟಾಂಗ್ (ವಿಡಿಯೋ)

Krishnaveni K
ಶನಿವಾರ, 12 ಅಕ್ಟೋಬರ್ 2024 (10:20 IST)
Photo Credit: Facebook
ಬೆಂಗಳೂರು: ಕಾಂಗ್ರೆಸ್ ಶಾಸಕನಾಗಿದ್ದುಕೊಂಡು ರೈತರಿಗೆ ಅನುದಾನ ಮಾಡಿಕೊಡಲಾಗುತ್ತಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸಿದ ಕಾಂಗ್ರೆಸ್ ಶಾಸಕ ರಾಜು ಕಾಗೆ ವಿಡಿಯೋವೊಂದನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ ಘಟಕ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಶಾಸಕರಿಗೆ ಅನುದಾನ ನೀಡುತ್ತಿಲ್ಲ ಎಂಬ ಆರೋಪವಿದೆ. ಅದಕ್ಕೆ ತಕ್ಕಂತೆ ಇದೀಗ ರಾಜು ಕಾಗೆ ಕೂಡಾ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಆಡಳಿತ ಪಕ್ಷದ ಶಾಸಕನಾಗಿಯೇ ಹೀಗೆ ಹೇಳುತ್ತಿದ್ದೇನೆ. ನಮಗೆ ಅನ್ನ ಒದಗಿಸುವ ನಿಮಗೆ ಅನುಕೂಲ ಮಾಡಿಕೊಡದ ಮೇಲೆ ನಾವು ಬದುಕಿದ್ದು ಏನು ಪ್ರಯೋಜನ ಎಂದಿದ್ದಾರೆ.

ಇದರ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಆಡಳಿತ ಪಕ್ಷದ ಶಾಸಕನೇ ಆತ್ಮಹತ್ಯೆ ಬಗ್ಗೆ ಮಾತನಾಡುತ್ತಿರುವುದು ಇದೇ ಮೊದಲು. ಇದಕ್ಕೆ ಮೊದಲು ರೈತರು ಆತ್ಮಹತ್ಯೆ ಮಾಡಿಕೊಳ್ಳುವ ವರದಿ ನೋಡುತ್ತಿದ್ದೆವು. ಈಗ ಸರ್ಕಾರದ ಶಾಸಕನೇ ಅಸಹಾಯಕತೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಮಾತನಾಡುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾಗಿಲ್ಲ. ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳದೇ ಸರಣಿ ಭ್ರಷ್ಟಾಚಾರಗಳನ್ನು ಹೇಗೆ ನಡೆಸಬಹುದು ಎಂಬುದನ್ನು ಕಾಂಗ್ರೆಸ್ ಕರಗತ ಮಾಡಿಕೊಂಡಿದೆ. ಅನೈತಿಕ ಮತ್ತು ಅರಾಜಕತೆಯ ನಡುವೆ ರಾಜ್ಯ ಸರ್ಕಾರ ಸಿಲುಕಿಕೊಂಡಿದೆ ಎಂಬುದನ್ನು ತೋರಿಸುತ್ತದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments