Webdunia - Bharat's app for daily news and videos

Install App

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Webdunia
ಭಾನುವಾರ, 18 ಜುಲೈ 2021 (20:32 IST)
ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಭಾನುವಾರ ಅಧಿಕೃತ ಆದೇಶ ಹೊರಡಿಸಿದೆ. 
2021-22 ನೇ ಸಾಲಿನ ಬಜೆಟ್ ವೇಳೆ ಘೋಷಿಸಿದಂತೆ ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಿಸಲು ಹಾಗೂ ನಿಗಮದ ಚಟುವಟಿಕೆಗಳಿಗೆ 500 ಕೋಟಿ ರೂ. ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
ಇಲಾಖೆಯ ಅಧೀನ ಕಾರ್ಯದರ್ಶಿ ವಿ. ಅಕ್ಕಮಹಾದೇವಿ ಆದೇಶದಲ್ಲಿ, ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಸರ್ಕಾರದ ಈ ಆದೇಶವನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments