Webdunia - Bharat's app for daily news and videos

Install App

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Webdunia
ಭಾನುವಾರ, 18 ಜುಲೈ 2021 (20:32 IST)
ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಭಾನುವಾರ ಅಧಿಕೃತ ಆದೇಶ ಹೊರಡಿಸಿದೆ. 
2021-22 ನೇ ಸಾಲಿನ ಬಜೆಟ್ ವೇಳೆ ಘೋಷಿಸಿದಂತೆ ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಿಸಲು ಹಾಗೂ ನಿಗಮದ ಚಟುವಟಿಕೆಗಳಿಗೆ 500 ಕೋಟಿ ರೂ. ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
ಇಲಾಖೆಯ ಅಧೀನ ಕಾರ್ಯದರ್ಶಿ ವಿ. ಅಕ್ಕಮಹಾದೇವಿ ಆದೇಶದಲ್ಲಿ, ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಸರ್ಕಾರದ ಈ ಆದೇಶವನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಕುಟುಂಬದ ಹತ್ತು ಮಂದಿಗೆ ಅಲ್ಲಾನ ಆಶೀರ್ವಾದ ಸಿಕ್ಕಿದೆ ಎಂದು ಕಣ್ಣೀರಿಟ್ಟ ಉಗ್ರ ಮಸೂದ್

Operation Sindoor: ಸಿಂಧೂರ ಕಸಿದವನು ತನ್ನ ಕುಟುಂಬ ಕಳೆದುಕೊಂಡಿದ್ದಾನೆ ಎಂದ ಯೋಗಿ ಆದಿತ್ಯನಾಥ್‌

Operation Sindoor: ಪಾಕ್‌ ಸೇನೆ ಅಪ್ರಚೋದಿತ ಗುಂಡಿನ ದಾಳಿ: 15 ಮಂದಿ ನಾಗಕರಿಕರು ಸಾವು

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

ಮುಂದಿನ ಸುದ್ದಿ
Show comments