Webdunia - Bharat's app for daily news and videos

Install App

ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

Webdunia
ಭಾನುವಾರ, 18 ಜುಲೈ 2021 (20:32 IST)
ರಾಜ್ಯ ಬಜೆಟ್ ನಲ್ಲಿ ಘೋಷಿಸಿದಂತೆ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ರಾಜ್ಯ ಸರ್ಕಾರ ಭಾನುವಾರ ಅಧಿಕೃತ ಆದೇಶ ಹೊರಡಿಸಿದೆ. 
2021-22 ನೇ ಸಾಲಿನ ಬಜೆಟ್ ವೇಳೆ ಘೋಷಿಸಿದಂತೆ ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹೊಸ ನಿಗಮ ಸ್ಥಾಪಿಸಲು ಹಾಗೂ ನಿಗಮದ ಚಟುವಟಿಕೆಗಳಿಗೆ 500 ಕೋಟಿ ರೂ. ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
ಇಲಾಖೆಯ ಅಧೀನ ಕಾರ್ಯದರ್ಶಿ ವಿ. ಅಕ್ಕಮಹಾದೇವಿ ಆದೇಶದಲ್ಲಿ, ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ, ಗೌಡ ಕುಂಚಿಟಿಗ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನ ಕೊಳಗ, ಉತ್ತಮ ಕೊಳಗ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ ಪೂರಕ ಹುದ್ದೆಗಳನ್ನು ಸೃಷ್ಟಿಸುವ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಮ್ಮ ಟ್ವಿಟರ್ ಖಾತೆಯಲ್ಲಿ ಸರ್ಕಾರದ ಈ ಆದೇಶವನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments