Publish Date: Fri, 05 Jun 2026 (15:31 IST)
Updated Date: Fri, 05 Jun 2026 (15:35 IST)
ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಮೂರು ಸ್ಥಾನಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರ ಹೆಸರನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು, ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.
ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದು, ಸದ್ಯ ಅವರು ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ. ರಾಜ್ಯಸಭೆಯ ಉಪಸಭಾಪತಿಯಾಗಿದ್ದ ಹಾಗೂ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಅವರಿಗೆ ಎಐಸಿಸಿ ಅವಕಾಶ ಕಲ್ಪಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ನಾರಾಯಣ ಕೊರಗಪ್ಪ, ಈರಣ್ಣ ಕಡಾಡಿ ಅವರ ಅವಧಿ ಮುಕ್ತಾಯವಾಗುತ್ತದೆ.
ಕರ್ನಾಟಕದಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ ಈ ನಾಲ್ಕು ಸ್ಥಾನಗಳು ಸೇರಿ ರಾಜ್ಯಸಭೆಯ ಒಟ್ಟು 24 ಸ್ಥಾನಗಳಿಗೆ ಇದೇ 18ರಂದು ಚುನಾವಣೆ ನಿಗದಿಯಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಮೂರು ಹಾಗೂ ಬಿಜೆಪಿಗೆ ಒಂದು ಸ್ಥಾನ ಸಿಗಲಿದೆ.
ಇನ್ನೂ ನಾಮಪತ್ರ ಸಲ್ಲಿಕೆಗೆ ಜೂನ್ 8ಕ್ಕೆ ಕೊನೆಯ ದಿನ. ನಾಮಪತ್ರಗಳ ಪರಿಶೀಲನೆ 9ಕ್ಕೆ ನಡೆಯಲಿದ್ದು, ನಾಮಪತ್ರ ಹಿಂದಕ್ಕೆ ಪಡೆಯಲು 10 ಕೊನೆ ದಿನ. 18ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಸಂಜೆ 5ಕ್ಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ