Webdunia - Bharat's app for daily news and videos

Install App

ನಿಗದಿಯಂತೆ ರಾಜ್ಯಸಭೆ ಚುನಾವಣೆ ನಡೆಯಲಿ: ಆಯೋಗಕ್ಕೆ ಕಾಂಗ್ರೆಸ್ ನಿಯೋಗ ಮನವಿ

Webdunia
ಸೋಮವಾರ, 6 ಜೂನ್ 2016 (14:34 IST)
ನಿಗದಿ ಪಡಿಸಿರುವಂತೆ ರಾಜ್ಯಸಭೆ ಚುನಾವಣೆ ನಡೆಯಲಿ ಎಂದು ಕಾಂಗ್ರೆಸ್ ನಿಯೋಗ ಇಂದು ದೆಹಲಿಗೆ ತೆರಳಿ ಕೇಂದ್ರ ಚುನಾವಣಾಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದೆ.
 
ಕೇಂದ್ರ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯಸಭೆ ಚುನಾವಣೆಗೆ ಮತ ನೀಡಿ ಎಂದು ಶಾಸಕರಿಗೆ ಕಾಂಗ್ರೆಸ್ ಪಕ್ಷ ಆಮಿಷ ಒಡ್ಡಿಲ್ಲ. ಜೆಡಿಎಸ್ ಪಕ್ಷ ಸುಳ್ಳು ವದಂತಿಗಳನ್ನು ಹರಿಬಿಡುತ್ತಿದೆ. ಆದರಿಂದ ಚುನಾವಣೆಯನ್ನು ನಿಗದಿತ ದಿನಾಂಕದಂದೆ ನಡೆಸುವಂತೆ ಕೇಂದ್ರ ಚುನಾವಣಾಧಿಕಾರಿ ನಸೀಮ್ ಜೈದ್ ಅವರಿಗೆ ಮನವಿ ಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
 
ರಾಜ್ಯಸಭೆ ಚುನಾವಣೆಗೆ ಮತ ನೀಡಿ ಎಂದು ಕಾಂಗ್ರೆಸ್ ಯಾರನ್ನು ಮನವೊಲಿಸುವ ಅವಶ್ಯಕತೆ ಇಲ್ಲ. ಇಂತಹ ಪದ್ಧತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಂಬಿಕೆ ಇಲ್ಲ. ನಮ್ಮ ಬಳಿ ಹೆಚ್ಚುವರಿಯಾಗಿ 31 ಮತಗಳಿರುವುದರಿಂದ ಮೂರನೆಯ ಅಭ್ಯರ್ಥಿಯಾಗಿ ಕೆ.ಸಿ.ರಾಮಮೂರ್ತಿಯವರನ್ನು ಕಣಕ್ಕಿಳಿಸಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ಕುದುರೆ ವ್ಯಾಪಾರ ನಡೆದಿದೆ. ಕಾಂಗ್ರೆಸ್ ಪಕ್ಷದವರು ಶಾಸಕರ ಕ್ಷೇತ್ರಕ್ಕೆ 100 ಕೋಟಿ ಅನುದಾನ ನೀಡುವುದಾಗಿ ಆಮಿಷ ಒಡ್ಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಸಭೆ ಚುನಾವಣೆಯನ್ನು ಮುಂದೂಡಬೇಕು ಎಂದು ಜೆಡಿಎಸ್ ಮನವಿ ಮಾಡಿಕೊಂಡಿತ್ತು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಬಹಳ ಜಾಣೆ, ಎರಡೇ ತಿಂಗಳಲ್ಲಿ ಕನ್ನಡ ಕಲಿತರಂತೆ

ಸರ್ಕಾರಕ್ಕೆ ಮುಜುಗರ ತಂದಿಟ್ಟ ಬೆನ್ನಲ್ಲೇ ಬಿಆರ್ ಪಾಟೀಲ್ ಗೆ ಸಿಎಂ ಬುಲಾವ್

ಎಂಜಿನಿಯರಿಂಗ್ ವಿದ್ಯಾರ್ಥಿಗಳೇ ಗಮನಿಸಿ, ಇನ್ಮೇಲೆ ಹೊಸ ರೂಲ್ಸ್

ಇರಾನ್ ಪ್ರತೀಕಾರದ ಕಿಚ್ಚು: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪಕ್ಕಾ

ಮುಂದಿನ ಸುದ್ದಿ
Show comments