Select Your Language

Notifications

webdunia
webdunia
webdunia
webdunia

ಬೆಂಗಳೂರು ತಲುಪಿದ ಸಿಎಂ ಪುತ್ರ ರಾಕೇಶ್ ಪಾರ್ಥಿವ ಶರೀರ!

ಬೆಂಗಳೂರು ತಲುಪಿದ ಸಿಎಂ ಪುತ್ರ ರಾಕೇಶ್ ಪಾರ್ಥಿವ ಶರೀರ!
ಬೆಂಗಳೂರು , ಸೋಮವಾರ, 1 ಆಗಸ್ಟ್ 2016 (10:28 IST)
ಬಹು ಅಂಗಾಂಗ ವೈಫಲ್ಯದಿಂದ ಬೆಲ್ಜಿಯಂ ರಾಷ್ಟ್ರದಲ್ಲಿ ನಿಧನರಾದ ಸಿಎಂ ಸಿದ್ದರಾಮಯ್ಯ ಜೇಷ್ಠಪುತ್ರ ರಾಕೇಶ್ ಅವರ ಪಾರ್ಥಿವ ಶರೀರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ರಾಜ್ಯದ ಗಣ್ಯರು ನಿಲ್ದಾಣದಲ್ಲಿ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವರ್ಗದವರು ರಾಕೇಶ್ ಪಾರ್ಥಿವ ಶರೀರದೊಂದಿಗೆ ಆಗಮಿಸಿದರು. 
ಇಂದು ಬೆಳಗ್ಗೆ 9.15ಕ್ಕೆ ಪಾರ್ಥಿವ ಶರೀರ ಬೆಲ್ಜಿಯಂ ದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣ ತಲುಪಿದೆ.
 
ಪಾರ್ತಿವ ಶರೀರವನ್ನು ಮೈಸೂರಿನ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುತ್ತಿದ್ದು, ಮೈಸೂರು ಹೊರವಲಯದ ಟಿ.ಕಾಟೂರಿನ ಫಾರಂ ಹೌಸ್‌ನಲ್ಲಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು  ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಮಾಹಿತಿ ನೀಡಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಂಗಾಪುರದ ಮಾಜಿ ಅಧ್ಯಕ್ಷ, ಭಾರತೀಯ ಮೂಲದ ನಥನ್ ಅಸ್ವಸ್ಥ