Select Your Language

Notifications

webdunia
webdunia
webdunia
webdunia

ಉ-ಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ರ್ಯಾಲಿ

ಉತ್ತರ ಕರ್ನಾಟಕ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಒತ್ತಾಯಿಸಿ ಹಾವೇರಿಯಲ್ಲಿ ವಿವಿಧ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದರು.

ಉತ್ತರ ಕರ್ನಾಟಕ ರೈತ ಸಂಘ, ವಕೀಲರು ಸೇರಿದಂತೆ ವಿವಿಧ ಸಂಘಟನೆಯವರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ನಗರದ ಬೀದಿ ಬೀದಿಗಳಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗುವುದರ ಮೂಲಕ ಸಿದ್ದಪ್ಪ ವೃತ್ತದಲ್ಲಿ 1 ಗಂಟೆಗೂ ಹೆಚ್ಚು ರಸ್ತೆ ತಡೆ ನಡೆಸಿದ್ರು.

ಪದೇ ಪದೇ ಅನ್ಯಾಯಕ್ಕೆ ಒಳಗಾಗುತ್ತಿರುವ ಹಾಗೂ ಅಭಿವೃದ್ಧಿಯಲ್ಲಿ ಹಿಂದೆ ಉಳಿದಿರುವ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್  ಮಾಡಿದ್ದರು.





Share this Story:

Follow Webdunia kannada

ಮುಂದಿನ ಸುದ್ದಿ

ವೈಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜಗಳ ಮೇಲೆ ದಾಳಿ