Publish Date: Thu, 30 Mar 2023 (19:21 IST)
Updated Date: Thu, 30 Mar 2023 (19:36 IST)
75 ವರ್ಷ ಆದವರಿಗೆ, ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ,ಒಂದೇ ಕುಟುಂಬಕ್ಕೆ ಟಿಕೆಟ್ ಇಲ್ಲ.ಮೋದಿ, ಅಮಿತ್ ಶಾ ಒಳ್ಳೆಯ ನಿರ್ಣಯ ಮಾಡಿದ್ದಾರೆ.ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ.ಈ ಬಾರಿ ಯಾವುದೇ ಆಪರೇಷನ್ ಕಮಲ ಮಾಡಲ್ಲ.ಸ್ವಂತ ಬಲದಿಂದ ಅಧಿಕಾರಕ್ಕೆ ಬರುತ್ತೇವೆ.ಆಪರೇಷನ್ ಕಮಲ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಅಲ್ಲದೇ ಐತಿಹಾಸಿಕ ನಿರ್ಧಾರವನ್ನು ಬೊಮ್ಮಾಯಿ ಅವರು ಮಾಡಿದ್ದಾರೆ.ಮೋದಿ, ಅಮಿತ್ ಶಾ ಅವರಿಗೆ,ಶೋಭಾ ಕರಂದ್ಲಾಜೆ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ.2a ಹೋಗಿದ್ರೆ ಉಳಿದ ಸಮುದಾಯಕ್ಕೆ ಅನ್ಯಾಯ ಆಗ್ತಿತ್ತು.2d ಇಂದ ನಮಗೆ ನ್ಯಾಯ ಸಿಕ್ಕಿದೆ.ಯಾರಿಂದಲೂ ಕಿತ್ತುಕೊಂಡಿಲ್ಲ.2b ಅಲ್ಲಿ ಇದ್ದದ್ದನ್ನ ನಮಗೆ ಹಂಚಿದ್ದಾರೆ.ಅವರಿಗೆ EWS ಅಡಿಯಲ್ಲಿ ನೀಡಿದ್ದಾರೆ.ಇಂದು ರಾಮಜನ್ಮ ದಿನ,ಇಂದು ನಮಗೆ ನ್ಯಾಯ ಸಿಕ್ಕಿದೆ ಎಂದು ಯತ್ನಾಳ್ ಹೇಳಿದ್ರು