Webdunia - Bharat's app for daily news and videos

Install App

ರಾಮಮಂದಿರದ ಪ್ರಸ್ತಾಪ- ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ವಾಕ್ಸಮರ

geetha
ಬುಧವಾರ, 14 ಫೆಬ್ರವರಿ 2024 (19:00 IST)
ಬೆಂಗಳೂರು : ಬಜೆಟ್‌ ಅಧಿವೇಶನದ ಮೂರನೇ ದಿನ ಎರಡೂ ಪಕ್ಷಗಳ ಸದಸ್ಯರು ತಮ್ಮ ಹತೋಟಿಯನ್ನು ಕಳೆದುಕೊಂಡು ಕೂಗಾಟದಲ್ಲಿ ತೊಡಗಿದ್ದ ಕಾರಣ ಸುಮಾರು ಒಂದು ತಾಸುಗಳ ಕಾಲ ಮಾರುಕಟ್ಟೆಯ ವಾತಾವರಣ ಉಂಟಾಗಿತ್ತು. ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಭಾಷಣದ ವೇಳೆ ನಡೆದ ರಾಮಮಂದಿರದ ಪ್ರಸ್ತಾಪ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಯಿತು.

ರಾಜ್ಯಪಾಲರ ಭಾ಼ಷಣದ ಮೇಲಿನ ವಂದನಾ ನಿರ್ಣಯವನ್ನು ಅರ್ಪಿಸುವ ವೇಳೆ ಪ್ರಾಸ್ತಾವಿಕವಾಗಿ ಅಯೋಧ್ಯೆ ರಾಮಮಂದಿರ ನೀಡಿದ್ದ ಆಹ್ವಾನವನ್ನೂ ಕಾಂಗ್ರೆಸ್‌ ತಿರಸ್ಕರಿಸಿತ್ತು ಎಂದರು. ಇದಕ್ಕೆ ಕೆರಳಿದ ಸಚಿವ ಪ್ರಿಯಾಂಕ್‌ ಖರ್ಗೆ ರಾಷ್ಟ್ರಪತಿಯವರಿಗೇ ನೀವು ಆಹ್ವಾನ ನೀಡಿರಲಿಲ್ಲ ಎಂದು ಟೀಕಿಸಿದರು. 

ಪ್ರತ್ಯುತ್ತರ ನೀಡಿದ ಆರ್‌. ಅಶೋಕ್‌ ರಾಷ್ಟ್ರಪತಿಗಳಿಗೆ ಆಹ್ವಾನ ನೀಡಲಿಲ್ಲ ಎಂಬುದೆ ನೀವು ಬರದೆ ಇರುವುದಕ್ಕೆ ಕಾರಣವೇ ಎಂದಾಗ, ಅವರೊಬ್ಬರು ದಲಿತ ಮಹಿಳೆ ಎಂದು ನೀವು ಆಹ್ವಾನ ನೀಡಿಲ್ಲ ಎಂದು ಪ್ರಿಯಾಂಕ್‌ ಖರ್ಗೆ ಆರೋಪಿಸಿದರು. ಇದಕ್ಕೆ ಸಿಡಿದೆದ್ದ ಬಿಜೆಪಿ ನಾಯಕರಾದ ಸುನಿಲ್‌ ಕುಮಾರ್‌ ಕಾರ್ಕಳ , ಪ್ರಭು ಚವ್ಹಾಣ್‌ ಮುಂತಾದವರು ಅಯೋಧ್ಯೆ ಮಂದಿರ ನಿರ್ಮಿಸುವುದು ನಮ್ಮ ಬದ್ದತೆಯಾಗಿತ್ತು. ಅದಕ್ಕೆ ನೀವು ಇಲ್ಲದ ನೆಪ  ಹೂಡಿ ವಿರೋಧಿಸುತ್ತಿದ್ದೀರಾ. ರಾಮ ಲಕ್ಷ್ಮಣರ ಅಸ್ತಿತ್ವವನ್ನೇ ಕಾಂಗ್ರೆಸ್‌ ಪಕ್ಷವು ಪ್ರಶ್ನೆ ಮಾಡಿತ್ತ ಎಂದರು.ಬಿಜೆಪಿ ನಾಯಕರೆಲ್ಲಾ ಜೈಶ್ರೀರಾಮ್‌ ಎಂದು ಘೋಷಣೆ ಕೂಗಲಾರಂಭಿಸಿದರು. ಅಲ್ಲಿಗೆ ಸದನದ ಪ್ರತಿಯೊಬ್ಬರೂ ಎದ್ದು ನಿಂತು ಸಾಮೂಹಿಕವಾಗಿ ಕಿರುಚಾಟದಲ್ಲಿ ತೊಡಗಿಕೊಂಡ ಕಾರಣ ಕಲಾಪದ ಸಮಯ ಸಂಪೂರ್ಣವಾಗಿ ವ್ಯರ್ಥವಾಯಿತು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಂಬಕ್ಕೆ ಕಟ್ಟಿ ಯೋಧನ ಮೇಲೆ ಏಕಾಏಕಿ ದಾಳಿ ನಡೆಸಿದ ಗುಂಪು, Viral Video

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಮುಂದಿನ ಸುದ್ದಿ
Show comments