Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ರಾಮ- ರಹೀಂ ಎಲ್ಲರೂ ಒಂದೇ: ಸಚಿವ ಈಶ್ವರ ಖಂಡ್ರೆ

Sampriya
ಬುಧವಾರ, 10 ಜುಲೈ 2024 (19:31 IST)
Photo Courtesy X
ಬೀದರ್: ಬಿಜೆಪಿ ಜಾತಿ ಜಾತಿಗಳಲ್ಲಿ ಒಡೆದಾಳುವ ಕೆಲಸ ಮಾಡುತ್ತಿದ್ದು, ನಮಗೆ  ರಾಮ- ರಹೀಮ್ ಎಲ್ಲರೂ ಒಂದೇ. ನಮಗೆ ಆ ರೀತಿಯ ಭಾವನೆ ಇಲ್ಲ ಎಂದು ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಕುರಿತು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ರಾಮನಗರ ಜಿಲ್ಲೆ ಬದಲಾವಣೆ ತೀರ್ಮಾನವನ್ನು ಸಿಎಂ- ಡಿಸಿಎಂ ಮಾಡಲಿದ್ದಾರೆ. ರಾಮನಗರ ಹೆಸರಿನಲ್ಲಿ ರಾಮನ ಹೆಸರು ಇರುವುದಕ್ಕೆ ಬದಲಾವಣೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪ ಸುಳ್ಳು. ನಮಗೆ ಆ ರೀತಿಯ ಭಾವನೆ ಇಲ್ಲ ಎಂದರು.  

ಇನ್ನೂ ವಾಲ್ಮೀಕಿ ನಿಗಮದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಎಸ್‌ಐಟಿ ತಂಡ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಿದ್ದು, ಸರ್ಕಾರ ಅಕ್ರಮ ಹಣ ವಸೂಲಿ ಮಾಡಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವ ಕೆಲಸ ಮಾಡುತ್ತದೆ. ನಿಷ್ಪಕ್ಷಪಾತವಾಗಿ ಅಕ್ರಮದ ತನಿಖೆಯನ್ನು ಎಸ್‌ಐಟಿ ತಂಡ ಮಾಡಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments