Webdunia - Bharat's app for daily news and videos

Install App

ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ವಿಚಾರಕ್ಕೆ ಇಂದು ತೆರೆ

Webdunia
ಸೋಮವಾರ, 15 ಜುಲೈ 2019 (10:26 IST)
ಬೆಂಗಳೂರು : ಈಗಾಗಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಮಲಿಂಗಾ ರೆಡ್ಡಿಯವರು ಇಂದು ಸದನಕ್ಕೆ ಹಾಜರಾಗಲಿದ್ದು, ಅವರ  ಮುಂದಿನ ನಡೆ ಏನು ಎಂಬ ಗೊಂದಲ ಹಲವರಲ್ಲಿ ಮೂಡಿದೆ.




ನಿನ್ನೆ ಸಂಜೆ, ಬೆಂಗಳೂರು ಹೊರವಲಯದ ತೋಟದ ಮನೆಗೆ ಹೋಗಿದ್ದ ಸಿಎಂ, ಡಿಸಿಎಂ ಪರಮೇಶ್ವರ್, ಮಾಜಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ, ಡಿಕೆ ಬ್ರದರ್ಸ್, ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸಲು ಬಾರೀ ಕಸರತ್ತು ನಡೆಸಿದ್ದರು.


ಈ ಬಗ್ಗೆ ಇದೀಗ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ, ನನ್ನ ರಾಜೀನಾಮೆ ಅಂಗೀಕಾರವಾಗಿಲ್ಲ. ನಾನಿನ್ನು ಸದನದ ಸದಸ್ಯ. ಹೀಗಾಗಿ ನಾನು ಇಂದು ಅಧಿವೇಶನಕ್ಕೆ ಹಾಜರಾಗುತ್ತೇನೆ. ಇಂದು ಮಧ್ಯಾಹ್ನ  ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗುತ್ತೇನೆ ಎಂದು ಹೇಳಿದ್ದಾರೆ. ಹಾಗಾಗಿ ರಾಮಲಿಂಗಾ ರೆಡ್ಡಿಯವರ ರಾಜೀನಾಮೆ ವಿಚಾರಕ್ಕೆ ಇಂದು ತೆರೆಬೀಳಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments