Webdunia - Bharat's app for daily news and videos

Install App

ಕೇಂದ್ರ ಬಸ್ ನಿಲ್ದಾಣಕ್ಕೆ ರಾಮಲಿಂಗಾ ರೆಡ್ಡಿ ಭೇಟಿ

Webdunia
ಸೋಮವಾರ, 26 ಜೂನ್ 2023 (16:00 IST)
ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ ನೀಡಿ ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲು ಸರ್ಪ್ರೈಸ್ ವಿಸಿಟ್ ಕೊಟ್ಟ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣ ಆವರಣದಲ್ಲಿ ಸುತ್ತಾಡಿ ಮಹಿಳಾ ಪ್ರಯಾಣಿಕರನ್ನು ಮಾತನಾಡಿಸಿದ್ರು. ಶಕ್ತಿ ಯೋಜನೆಯಿಂದ ಲಾಭವಾಗಿದೆಯೇ ಎಂದು ಮಹಿಳಾ ಪ್ರಯಾಣಿಕರಿಂದ ಮಾಹಿತಿ ಪಡೆದುಕೊಂಡ್ರು. ಈ ವೇಳೆ ಶಕ್ತಿ ಯೋಜನೆಯಿಂದ ಲಾಭವಾಗಿದೆ ಎಂದು ಮಹಿಳಾ ಪ್ರಯಾಣಿಕರು ಸಂತಸ ಹಂಚಿಕೊಂಡರು. ಕಂಡಕ್ಟರ್ ಹಾಗೂ ಡ್ರೈವರ್‌ಗಳ ಜೊತೆಗೆ ಮಾತನಾಡಿ ಮಾಹಿತಿ ಪಡೆದ ಸಚಿವ ರಾಮಲಿಂಗಾರೆಡ್ಡಿ ಬಸ್ ನಿಲ್ದಾಣದಲ್ಲಿರುವ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿ ಅಲ್ಲಿನ ಮಾಹಿತಿ ಪಡೆದುಕೊಂಡರು. ರಾಮಲಿಂಗಾರೆಡ್ಡಿಗೆ ಶಾಸಕ ರಾಜು ಸೇಠ್ ಸೇರಿದಂತೆ ಸಾರಿಗೆ ಅಧಿಕಾರಿಗಳು ಸಾಥ್ ಕೊಟ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments