Webdunia - Bharat's app for daily news and videos

Install App

ರೀಲ್ಸ್ ಮಾಡುವ ಬಸ್‌ ಚಾಲಕರಿಗೆ ವಾರ್ನಿಂಗ್ ಕೊಟ್ಟ ರಾಮಲಿಂಗಾ ರೆಡ್ಡಿ

Sampriya
ಭಾನುವಾರ, 21 ಜುಲೈ 2024 (15:47 IST)
ಬೆಂಗಳೂರು: ಕರ್ತವ್ಯದ ವೇಳೆ ಸರ್ಕಾರಿ ಬಸ್‌ ಚಾಲಕರು, ನಿರ್ವಾಹಕರು ರೀಲ್ಸ್ ಮಾಡಿದ್ದಲ್ಲಿ ಅಂತವರನ್ನು ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕರ್ತವ್ಯದ ವೇಳೆ ರೀಲ್ಸ್​ ಮಾಡುವವರು ಈ ಕೆಲಸದಲ್ಲಿ ಇರಲು ಅನರ್ಹರು. ಹುಚ್ಚಾಟದಲ್ಲಿ ರೀಲ್ಸ್ ಮಾಡುವವರನ್ನು ಯಾವುದೇ ಮುಲಾಜಿಲ್ಲದೆ ಅಮಾನತು ಮಾಡಲಾಗುವುದು ಎಂದು ಹೇಳಿದರು.

ಈಚೆಗೆ ಸರ್ಕಾರಿ ಬಸ್‌ ಚಾಲಕರು ಮತ್ತು ನಿರ್ವಾಹಕರು ಹೆಚ್ಚಾಗಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿದ್ದಾರೆ. ಈಚೆಗೆ ಬಸ್‌ ಒಳಗೆ ಕೊಡೆ ಹಿಡಿದುಕೊಂಡು ಕೆಎಸ್ಆರ್'ಟಿಸಿ ಬಸ್ ಚಾಲಯಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಇನ್ನೊಂದು ಘಟನೆಯಲ್ಲಿ ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಹೊರಟಿದ್ದ ಬಸ್ ನಲ್ಲಿ ಚಾಲಕನ ರೀಲ್ಸ್ ಹುಚ್ಚಾಟಕ್ಕೆ ಎರಡು ಎತ್ತುಗಳು ಸಾವನ್ನಪ್ಪಿದವು.  ರೀಲ್ಸ್‌ಗೆ ಪೋಸ್ ನೀಡಲು ಹೋದ ಬಸ್ ಚಾಲಕ ಎರಡು ಎತ್ತುಗಳಿಗೆ ಡಿಕ್ಕಿ ಮಾಡಿದ್ದ. ಅಪಘಾತದ ರಭಸಕ್ಕೆ ಎರಡು ಎತ್ತುಗಳು ಸ್ಥಳದಲ್ಲೇ ಸಾವನ್ನಪ್ಪಿದ್ದವು. ರೈತ ಮಂಜುನಾಥ್ ಎಂಬುವವರ ಮೆದುಳು ನಿಷ್ಕ್ರಿಯವಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments