Webdunia - Bharat's app for daily news and videos

Install App

ಬಿಜೆಪಿ ಟೀಕೆಗೆ ರಾಮಲಿಂಗಾರೆಡ್ಡಿ ತಿರುಗೇಟು!

geetha
ಸೋಮವಾರ, 8 ಜನವರಿ 2024 (20:00 IST)
ಬೆಂಗಳೂರು : ಬಿಜೆಪಿ ಪಕ್ಷ ಹುಟ್ಟುವುದಕ್ಕೂ ಮುಂಚೆಯೇ ಶ್ರೀರಾಮ ಚಂದ್ರನ ಆರಾಧನೆ ಈ ದೇಶದಲ್ಲಿ ನಡೆಯುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಜ. 22 ರಂದು ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದ ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿರುವ ನಿರ್ಧಾರವನ್ನು ಬಿಜೆಪಿ ಒತ್ತಾಯದಿಂದ ತೆಗೆದುಕೊಂಡಿಲ್ಲ. ಕಾಂಗ್ರೆಸ್‌ ಹಿಂದಿನಿಂದಲೂ ಎಲ್ಲಾ ಧರ್ಮದವರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ದಿನ ವಿಶೇಷ ಪೂಜೆ ಹಮ್ಮಿಕೊಂಡಿರುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿದ್ದ ಬಿಜೆಪಿ,  ಇದು ಡೀಪ್‌ ಫೇಕ್‌ ವಿಡಿಯೋ ಅಲ್ಲ. ಶ್ರೀರಾಮನ ಶಕ್ತಿ ಕಾಂಗ್ರೆಸ್‌ ಪಕ್ಷವನ್ನೇ ಬದಲಾಯಿಸಿ ಬಿಟ್ಟಿದೆ. ಈ ಹಿಂದೆ ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಕಾಂಗ್ರೆಸ್‌, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಈಗ ರಾಮಜಪದಲ್ಲಿ ನಿರತವಾಗಿದೆ ಎಂದು ಲೇವಡಿ ಮಾಡಿತ್ತು. 
 
ಇದಕ್ಕೆ ತಮ್ಮ ಎಕ್ಸ್‌ ಖಾತೆಯ ಮೂಲಕ ಪ್ರತ್ಯುತ್ತರ ನೀಡಿರುವ ರಾಮಲಿಂಗಾ ರೆಡ್ಡಿ, ಅಯೋಧ್ಯೆ ವಿವಾದ  ಈಗ ಮುಗಿದ ಹೋದ ಕಥೆ. ಅದನ್ನೇ ಮುಂದಿಟ್ಟುಕೊಂಡು ಬಿಜೆಪಿಯವರು ಮಾತ್ರ ರಾಮಭಕ್ತರು ಬೇರೆಯವರು ಅಲ್ಲ ಎನ್ನುವುದು ಸ್ವಲ್ಪ ಅತಿಯಾಯಿತು ಎಂದಿದ್ದಾರೆ. ಜೊತೆಗೆ, ಸದಾ ಒಳ್ಳೆಯದೇ ಗೆಲ್ಲುತ್ತದೆ . ಧರ್ಮಕ್ಕೆ ವಿಜಯವಾಗುತ್ತದೆ ಎಂಬುವುದಕ್ಕೆ ಕರ್ನಾಟಕ ಚುನಾವಣೆಯೇ ಸಾಕ್ಷಿ ಎಂದು ಕುಟುಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments