Webdunia - Bharat's app for daily news and videos

Install App

ಬಿಜೆಪಿ ಟೀಕೆಗೆ ರಾಮಲಿಂಗಾರೆಡ್ಡಿ ತಿರುಗೇಟು!

geetha
ಸೋಮವಾರ, 8 ಜನವರಿ 2024 (20:00 IST)
ಬೆಂಗಳೂರು : ಬಿಜೆಪಿ ಪಕ್ಷ ಹುಟ್ಟುವುದಕ್ಕೂ ಮುಂಚೆಯೇ ಶ್ರೀರಾಮ ಚಂದ್ರನ ಆರಾಧನೆ ಈ ದೇಶದಲ್ಲಿ ನಡೆಯುತ್ತಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿರುಗೇಟು ನೀಡಿದ್ದಾರೆ. ಜ. 22 ರಂದು ಮುಜರಾಯಿ ಇಲಾಖೆಯ ವತಿಯಿಂದ ರಾಜ್ಯದ ಎಲ್ಲಾ ದೇಗುಲಗಳಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿರುವ ನಿರ್ಧಾರವನ್ನು ಬಿಜೆಪಿ ಒತ್ತಾಯದಿಂದ ತೆಗೆದುಕೊಂಡಿಲ್ಲ. ಕಾಂಗ್ರೆಸ್‌ ಹಿಂದಿನಿಂದಲೂ ಎಲ್ಲಾ ಧರ್ಮದವರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ದಿನ ವಿಶೇಷ ಪೂಜೆ ಹಮ್ಮಿಕೊಂಡಿರುವುದಾಗಿ ಸಚಿವ ರಾಮಲಿಂಗಾ ರೆಡ್ಡಿ ನೀಡಿದ್ದ ಹೇಳಿಕೆಯನ್ನು ಹಂಚಿಕೊಂಡಿದ್ದ ಬಿಜೆಪಿ,  ಇದು ಡೀಪ್‌ ಫೇಕ್‌ ವಿಡಿಯೋ ಅಲ್ಲ. ಶ್ರೀರಾಮನ ಶಕ್ತಿ ಕಾಂಗ್ರೆಸ್‌ ಪಕ್ಷವನ್ನೇ ಬದಲಾಯಿಸಿ ಬಿಟ್ಟಿದೆ. ಈ ಹಿಂದೆ ರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ಕಾಂಗ್ರೆಸ್‌, ರಾಮನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್‌ ಈಗ ರಾಮಜಪದಲ್ಲಿ ನಿರತವಾಗಿದೆ ಎಂದು ಲೇವಡಿ ಮಾಡಿತ್ತು. 
 
ಇದಕ್ಕೆ ತಮ್ಮ ಎಕ್ಸ್‌ ಖಾತೆಯ ಮೂಲಕ ಪ್ರತ್ಯುತ್ತರ ನೀಡಿರುವ ರಾಮಲಿಂಗಾ ರೆಡ್ಡಿ, ಅಯೋಧ್ಯೆ ವಿವಾದ  ಈಗ ಮುಗಿದ ಹೋದ ಕಥೆ. ಅದನ್ನೇ ಮುಂದಿಟ್ಟುಕೊಂಡು ಬಿಜೆಪಿಯವರು ಮಾತ್ರ ರಾಮಭಕ್ತರು ಬೇರೆಯವರು ಅಲ್ಲ ಎನ್ನುವುದು ಸ್ವಲ್ಪ ಅತಿಯಾಯಿತು ಎಂದಿದ್ದಾರೆ. ಜೊತೆಗೆ, ಸದಾ ಒಳ್ಳೆಯದೇ ಗೆಲ್ಲುತ್ತದೆ . ಧರ್ಮಕ್ಕೆ ವಿಜಯವಾಗುತ್ತದೆ ಎಂಬುವುದಕ್ಕೆ ಕರ್ನಾಟಕ ಚುನಾವಣೆಯೇ ಸಾಕ್ಷಿ ಎಂದು ಕುಟುಕಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments