Webdunia - Bharat's app for daily news and videos

Install App

ರಾಮನಗರ ಬಂದ್ : ಪೊಲೀಸ್ ಸರ್ಪಗಾವಲಿನಲ್ಲಿ ಕನಕಪುರ

Webdunia
ಗುರುವಾರ, 5 ಸೆಪ್ಟಂಬರ್ 2019 (19:57 IST)
ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ರಾಮನಗರದಲ್ಲಿ ಪ್ರತಿಭಟನೆಗಳು, ಬಂದ್ ಮುಂದುವರಿದಿರುವಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.  

ಬಂದ್ ಹಿನ್ನಲೆಯಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ವರ್ತಿಸಬೇಕು‌. ಎಲ್ಲಿಯೂ ಗಲಾಟೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.

ಸೂಕ್ಷ್ಮ ಪ್ರದೇಶವಾದ ಕನಕಪುರದಲ್ಲಿಯೇ ಒಬ್ಬರು ಎಸ್ಪಿ ಇದ್ದಾರೆ. ಪೆಟ್ರೋಲಿಂಗ್ ನಡೆಸಲಾಗುತ್ತಿದೆ. ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿಯನ್ನು ಗಸ್ತಿನ ಮೂಲಕ ನಿಯೋಜಿಸಲಾಗಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ಭಯ ಪಡುವ ಅಗತ್ಯ ಇಲ್ಲ ಎಂದ್ರು. ಬಂದ್ ಹಿನ್ನಲೆಯಲ್ಲಿ‌ ಕೆಎಸ್ಅರ್ಟಿಸಿ ಅವರೇ ಬಸ್ ಸಂಚಾರ ಸ್ಥಗಿತಗೊಳಿಸಿದ್ದಾರೆ. ತುರ್ತು ಸೇವೆಗಳಿಗೆ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ನಮ್ಮೊಂದಿಗೆ ಸಹಕಾರ ನೀಡಿದರೆ, ಆದಷ್ಟು ಶೀಘ್ರವೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಗುವುದು ಅಂತ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನು, ರಾಮನಗರ, ಕನಕಪುರ ಹಾಗೂ ಡಿಕೆ ಶಿವಕುಮಾರ್ ಸ್ವಗ್ರಾಮ ದೊಡ್ಡ ಆಲಹಳ್ಳಿಯಲ್ಲಿ ತೀವ್ರಗೊಂಡಿದೆ ಪ್ರತಿಭಟನೆ. ಬೈಕ್ ರ್ಯಾಲಿ, ಟೈಯರ್ ಗೆ ಬೆಂಕಿ ಹಚ್ಚಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments