Select Your Language

Notifications

webdunia
webdunia
webdunia
Sunday, 13 April 2025
webdunia

ರಾಮನಗರದವ್ರು ಹೊರಗೆ ಕಾಲಿಡಲೇಬೇಡಿ ಎಂದ ಸಚಿವ

ಬಿ.ಶ್ರೀರಾಮುಲು
ರಾಮನಗರ , ಶನಿವಾರ, 28 ಮಾರ್ಚ್ 2020 (16:16 IST)
ರಾಮನಗರ ಜಿಲ್ಲೆಯ ಜನರು ತಮ್ಮಮನೆಗಳಿಂದ ಹೊರಗಡೆ ಕಾಲಿಡಬಾರದು.

ಹೀಗಂತ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.  ಕೋವಿಡ್-19 ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಠಿಯಿಂದ 21 ದಿನಗಳು ಮನೆಯ ಒಳಗೆ ಇರುವಂತೆ ತಿಳಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಆರೋಗ್ಯ ಕಪಾಡಿಕೊಳ್ಳಿ ಎಂದಿದ್ದಾರೆ.

ಕೋವಿಡ್ -19 ಹರಡದಂತೆ ನೋಡಿಕೊಳ್ಳಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅವರು ಪ್ರತಿ ದಿನ ಶ್ರಮ ಪಡುತ್ತಿದ್ದಾರೆ. ಅವರ ಶ್ರಮವನ್ನು ಅರ್ಥ ಮಾಡಿಕೊಳ್ಳಿ. ಅತೀ ಜರೂರು ಕೆಲಸ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ.
ಕೊರೋನಾ ವೈರಸ್ ಸೋಂಕಿಗೆ ಯಾವುದೇ ಔಷಧಿ ಇಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು, ರೋಗ ತಡೆಗಟ್ಟಬಹುದು ಎಂದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಕರ್ಫ್ಯೂ : ಹೆಸರು ನೊಂದಾಯಿಸಿದರೆ ಸಿಗುತ್ತೆ ಊಟ