Select Your Language

Notifications

webdunia
webdunia
webdunia
webdunia

ಗೃಹ ಸಚಿವರನ್ನು ವಜಾಗೊಳಿಸಲು ರಮೇಶ್ ಬಾಬು ಆಗ್ರಹ

ಗೃಹ ಸಚಿವರನ್ನು ವಜಾಗೊಳಿಸಲು ರಮೇಶ್ ಬಾಬು ಆಗ್ರಹ
ಬೆಂಗಳೂರು , ಶನಿವಾರ, 14 ಜನವರಿ 2023 (09:04 IST)
ಬೆಂಗಳೂರು : ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕಿಮ್ಮನೆ ರತ್ನಾಕರ್ ಅವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ.

ಅವರನ್ನು ಈ ಕೂಡಲೇ ಸಂಪುಟದಿಂದ ವಜಾ ಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ 4 ಬಾರಿ ಸೋತಿದ್ದು, ಈಗ 4 ಬಾರಿ ಗೆಲುವು ಸಾಧಿಸಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ರಾಜಕೀಯಕ್ಕೆ ಬಂದ ಆರಗ ಜ್ಞಾನೇಂದ್ರ ಅವರು ತಾವು ಗಣೇಶ್ ಭಟ್ ಎಂಬವರಿಂದ ನೈತಿಕತೆ ಕಲಿತಿದ್ದೇನೆ, ನಾನು ಸಂಘ ಪರಿವಾರದ ನೈತಿಕತೆಯನ್ನು ಪಾಲನೆ ಮಾಡುತ್ತೇನೆ ಎಂದು ಆಗಾಗ್ಗೆ ಹೇಳುತ್ತಿರುತ್ತಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದು `ಡಬಲ್’ ತಂತ್ರಕ್ಕೆ ಕಾರಣಗಳೇನು?