Publish Date: Fri, 02 Aug 2019 (10:38 IST)
Updated Date: Fri, 02 Aug 2019 (10:42 IST)
ಕೊಪ್ಪಳ : ಕಾಂಗ್ರೆಸ್ ನಿಂದ ಅನರ್ಹಗೊಂಡ ಅತೃಪ್ತ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿಗೆ ಸೇರಲಿದ್ದಾರೆ ಎಂಬ ಅನುಮಾನ ಇದೀಗ ಎಲ್ಲಾ ಕಡೆ ಕೇಳಿಬರುತ್ತಿದೆ.
ಇದಕ್ಕೆ ಮುಖ್ಯ ಕಾರಣವೆನೆಂದರೆ ಇತ್ತೀಚೆಗೆ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ನಾಯಕರು ಅಭಿನಂದನೆ ಸಲ್ಲಿಸುವ ಫ್ಲೆಕ್ಸ್ ನಲ್ಲಿ ರಮೇಶ್ ಜಾರಕಿಹೊಳಿ ಫೋಟೋ ಕೂಡ ಹಾಕಲಾಗಿದೆ.
ಕೊಪ್ಪಳ ಬಿಜೆಪಿ ನಾಯಕರ ಜೊತೆಯಲ್ಲಿ ರಮೇಶ್ ಜಾರಕಿಹೊಳಿ ಅವರ ಫೋಟೋ ಹಾಕಿರುವುದನ್ನು ಕಂಡು ರಮೇಶ್ ಜಾರಕಿಹೊಳಿ ಬಿಜೆಪಿ ಸೇರಲಿದ್ದಾರಾ ಎಂಬ ಅನುಮಾನ ಜನರಲ್ಲಿ ವ್ಯಕ್ತವಾಗಿದೆ.