Webdunia - Bharat's app for daily news and videos

Install App

ಬಿಜೆಪಿಯ ಮೂವರಿಂದ ದ್ರೋಹ: ರಮೇಶ್ ಜಾರಕಿಹೊಳಿ ಬಾಂಬ್

Webdunia
ಬುಧವಾರ, 30 ಜೂನ್ 2021 (15:28 IST)
ಬಿಜೆಪಿಯ ಮೂವರು ಶಾಸಕರಿಂದಲೇ ನನಗೆ ದ್ರೋಹ ಆಗಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಳಗೆ ಬಿದ್ದವನ ಮೇಲೆ ಆಳಿಗೊಂದು ಕಲ್ಲು ಎಂಬಂತೆ ನನ್ನನ್ನು ತುಳಿಯಲು ನೋಡುತ್ತಿದ್ದಾರೆ. ನಮ್ಮ ಜೊತೆಗೆ ಇದ್ದು ಬೆನ್ನಿಗೆ ಚೂರಿ ಹಾಕುವ ಕೆಲಸವನ್ನು ಬಿಜೆಪಿಯ ಮೂವರು ಶಾಸಕರು ಮಾಡಿದ್ದಾರೆ ಎಂದರು.
 
ನನ್ನ ಜೊತೆಯಲ್ಲೇ ಇದ್ದು ದ್ವೇಷ ಸಾಧಿಸುತ್ತಿದ್ದಾರೆ. ನನಗೆ ದ್ರೋಹ ಮಾಡಿದವರು ಯಾರು ಎಂಬುದು ಬಹಿರಂಗಪಡಿಸುತ್ತೇನೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರ ಷಡ್ಯಂತ್ರ ಬಯಲು ಮಾಡುತ್ತೇನೆ. ಶೀಘ್ರದಲ್ಲೇ ಅವರ ಆಡಿಯೋ- ವೀಡಿಯೊವನ್ನು ಬಿಡುಗಡೆ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಸವಾಲು ಹಾಕಿದರು.
 
ನನಗೆ ರಾತ್ರಿ 2 ಗಂಟೆಗೆ ಕರೆ ಬಂದಿದೆ. ಅವರ ಆಹ್ವಾನದ ಮೇರೆಗೆ ದೆಹಲಿಗೆ ಬಂದಿದ್ದೇನೆ. ನನ್ನ ದೆಹಲಿ ಭೇಟಿ ಅವರಿಗೆ ಶಾಕ್ ನೀಡಿದೆ. ಎಲ್ಲರಿಗೂ ಶಾಕ್ ಆಗಲಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments