Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಬಿಜೆಪಿಯತ್ತ?

Webdunia
ಶನಿವಾರ, 29 ಡಿಸೆಂಬರ್ 2018 (21:21 IST)
ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಅಸಮಧಾನಗೊಂಡಿರುವ ರಮೇಶ ಜಾರಕಿಹೊಳಿ ಅವರ ಮುಂದಿನ ನಡೆ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಅವರು ಬಿಜೆಪಿಯತ್ತ ಮುಖಮಾಡಿದ್ದಾರೆ ಎಂಬ ಮಾತುಗಳು ಹರಿದಾಡಲಾರಂಭಿಸಿವೆ.

ಕಳೆದ ಐದಾರು ದಿನಗಳಿಂದ ಯಾರ ಕೈಗೂ ಸಿಗದೆ ಅಜ್ಞಾತ ಸ್ಥಳದಲ್ಲಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಜಕೀಯ ನಡೆ ತೀವ್ರ ಕುತೂಹಲ ಕೆರಳಿಸಿದೆ.

ಎರಡು ದಿನಗಳಿಂದ ಮುಂಬೈನಲ್ಲಿ ಇದ್ದರು ಎಂದು ಹೇಳುತ್ತಿದ್ದ ಬೆನ್ನಲ್ಲೆ  ರಮೇಶ್ ಜಾರಕಿಹೊಳಿ ಸಹೋದರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ, ಪುತ್ರ ಅಮರ್ನಾಥ್, ಅಳಿಯ ಅಂಬಿರಾವ್ ಪಾಟೀಲ್ ಅವರೊಂದಿಗೆ ದೆಹಲಿಯಲ್ಲಿ ಇರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಕಾಂಗ್ರೆಸ್ ನಾಯಕರು ಮತ್ತು ಸರ್ಕಾರದ ವಿರುದ್ಧ ಪದೇ ಪದೇ ಅತೃಪ್ತಿ ಮತ್ತು ಅಸಮಾಧಾನ ವ್ಯಕ್ತಪಡಿಸಿ, ಯಾವುದೇ ಸಭೆ-ಸಮಾರಂಭಗಳಿಗೆ ಹಾಜರಾಗದೆ ಸಚಿವ ಸ್ಥಾನ ಕಳೆದುಕೊಂಡಿರುವ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಒಳ ಒಳಗೆ ಬುಸುಗುಟ್ಟುತ್ತಿದ್ದು, ಯಾವ ಕ್ಷಣದಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ನಾಲ್ಕು ದಿನ ಸಮಯ ಕೊಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಶತಸಿದ್ಧ ಎಂದು ಪ್ರಕಟಿಸಿದ್ದ ರಮೇಶ್ ಜಾರಕಿಹೊಳಿ, ರಾಜೀನಾಮೆ ನಿರ್ಧಾರಕ್ಕೆ ಬದ್ಧರಾಗಿ ಬಿಜೆಪಿ ಸೇರುತ್ತಾರಾ? ಇಲ್ಲವೆ ಕಾಂಗ್ರೆಸ್ನಲ್ಲೆ ಉಳಿದುಕೊಳ್ಳುತ್ತಾರಾ ಎನ್ನುವ ಅನುಮಾನಗಳು ತೀವ್ರ ಗರಿಗೆದರಿವೆ. ರಮೇಶ ಜಾರಕಿಹೊಳಿ ಅವರ ನಡೆ ಬಗ್ಗೆ ಚರ್ಚೆಗಳು ನಡೆಯಲಾರಂಭಿಸಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments