ಕೇಂದ್ರ ಸರ್ಕಾರ ಎರಡನೇ ಬಾರಿಗೆ ಸಚಿವ ಸಂಪುಟದ ಪುನಾರಚಿಸಿದ್ದು, ಬಿಜಾಪುರದ ಸಂಸದ ರಮೇಶ್ ಜಿಗಜಿಣಿಗಿ ಅವರಿಗೆ ಕೇಂದ್ರ ಸಚಿವ ಸ್ಥಾನ ದೊರೆತಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ಸಂಪುಟ ದರ್ಜೆ ಸಚಿವರಾಗಿ 19 ಮಂದಿ ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಭೋದಿಸಿದರು.
1983ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಹಿಂದುಳಿದ ವರ್ಗದ ನಾಯಕ ಆ ಬಳಿಕ ಹಿಂತಿರುಗಿ ನೋಡಲೇ ಇಲ್ಲ. 64 ವರ್ಷದ ಅವರು ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲೇರುತ್ತ ಮುಂದೆ ಸಾಗಿದ್ದಾರೆ.
ಈಗಾಗಲೇ ಕರ್ನಾಟಕದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ್, ಕೇಂದ್ರ ಸಚಿವರಾಗಿ ಮುಂದುವರಿಯಲಿದ್ದು, ಜಿ.ಎಂ.ಸಿದ್ಧೇಶ್ವರ್ರನ್ನು ಕೇಂದ್ರ ಸಚಿವ ಸ್ಥಾನದಿಂದ ಕೈಬಿಡಲಾಗಿದೆ.
ರಾಷ್ಟ್ರಪತಿ ಭವನದಲ್ಲಿರುವ ಮೆಜೆಸ್ಟಿಕ್ ದರ್ಬಾರ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಎಲ್ಲ 19 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.