Webdunia - Bharat's app for daily news and videos

Install App

ಹಣಕ್ಕಾಗಿ ರಮೇಶ್ ಜಾರಕಿಹೊಳಿ ಮಾರಾಟ?: ಜೆಡಿಎಸ್ ಶಾಸಕ ಸ್ಫೋಟಿಸಿದ್ರು ಬಾಂಬ್

Webdunia
ಬುಧವಾರ, 3 ಜುಲೈ 2019 (19:37 IST)
ಮೈತ್ರಿ ಸರಕಾರದಲ್ಲಿ ಶಾಸಕ ಸ್ಥಾನಕ್ಕೆ ಕೈ ಪಡೆಯ ನಾಯಕರು ರಾಜೀನಾಮೆ ನೀಡಿರುವ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಶಾಸಕರ ವಿರುದ್ಧ ಜೆಡಿಎಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ ರಮೇಶ ಜಾರಕಿಹೊಳಿ ಹಣದ ಬೇಡಿಕೆ ಇಟ್ಟಿದ್ದರು ಎಂಬರ್ಥದಲ್ಲಿ ಪಿರಿಯಾಪಟ್ಟಣ ಜೆಡಿಎಸ್ ಶಾಸಕ ಕೆ.ಮಹದೇವ್ ಹೊಸ ಸುದ್ದಿ ಸ್ಫೋಟ ಮಾಡಿದ್ದಾರೆ.

ಕೇವಲ ಹಣಕ್ಕಾಗಿ ರಮೇಶ್ ಜಾರಕಿಹೊಳಿ ಅವರು ಪಕ್ಷಾಂತರ ಮಾಡುತ್ತಿದ್ದಾರೆ ಎಂಬರ್ಥದಲ್ಲಿ ಮಹದೇವ್ ಹೇಳಿಕೆ ನೀಡುವ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆಗೆ ಶುರುವಾಗಲು ನಾಂದಿ ಹಾಡಿದ್ದಾರೆ.

ಸಿಎಂ ಅವರನ್ನು ಜಾರಕಿಹೊಳಿ ಭೇಟಿ ಮಾಡಿದ್ದಾಗ ನಾನೂ ಅಲ್ಲೇ ಇದ್ದೆ. ಆಗ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಗೆ 80 ಕೋಟಿ ರೂ. ನೀಡಿದ್ರೆ ಮಾತ್ರ ಮೈತ್ರಿ ಸರಕಾರಕ್ಕೆ ಬೆಂಬಲ ಇಲ್ಲದಿದ್ರೆ ರಾಜೀನಾಮೆ ನೀಡೋ ಬೆದರಿಕೆ ಹಾಕಿದ್ರು ಎಂಬರ್ಥದಲ್ಲಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

30 ರಿಂದ 40 ಕೋಟಿ ರೂ. ನೀಡಲು ಬಿಜೆಪಿಯ ಕೆಲವು ಮುಖಂಡರು ನಮ್ಮ ಮನೆ ಬಳಿ ಬಂದಿದ್ರು ಎಂದು ದೂರಿದ ಅವರು, ಹಣವೂ ಬೇಡ ಕಮಲ ಪಡೆಯ ಸಹವಾಸವೂ ಬೇಡ ಎಂದು ತಿರಸ್ಕರಿದ್ದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments