Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು; ಆಪ್ತರ ಆಗ್ರಹ

Webdunia
ಬುಧವಾರ, 20 ಅಕ್ಟೋಬರ್ 2021 (11:26 IST)
ಬೆಳಗಾವಿ : ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕೆಂದು ಆಪ್ತರು ಆಗ್ರಹಿಸುತ್ತಿದ್ದಾರೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೊಟ್ಟರೆ ಕ್ಷೇತ್ರದಲ್ಲಿ ಕೆಲಸಗಳಾಗುತ್ತದೆ.

ಹೀಗಾಗಿ ಅವರಿಗೆ ಸಚಿವ ಸ್ಥಾನವನ್ನು ನೀಡಿ ಅಂತ ಬೆಳಗಾವಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ವರಿಷ್ಠರಿಗೆ ಮನವಿ ಮಾಡಿದ್ದಾರೆ. ನನಗೆ ಸಚಿವ ಸ್ಥಾನ ನೀಡಿ ಎಂದು ನಾನು ಕೇಳುತ್ತಿಲ್ಲ. ನನಗೆ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುವೆ ಅಂತ ಮಹೇಶ್ ಕುಮಟಳ್ಳಿ ಹೇಳಿಕೆ ನೀಡಿದ್ದಾರೆ.
ಜವಾಬ್ದಾರಿ ಸ್ಥಾನದಲ್ಲಿ ಮೊದಲು ಇದ್ದಂತವರು. ಪಕ್ಷವನ್ನು ಕೂಡ ಕಟ್ಟುತ್ತಿದ್ದಾರೆ. ಹಲವಾರು ರಾಜಕೀಯ ವಿದ್ಯಮಾನಗಳಲ್ಲಿ ಇದೆಲ್ಲ ನಡೆದಂತ ಘಟನೆ. ಮೊದಲಿನಿಂದಲೂ ನಾನು ಡಿಫೆಂಡ್ ಮಾಡಿಕೊಂಡು ಬಂದಿದ್ದೇನೆ, ಇವತ್ತು ಮಾಡಿಕೊಳ್ಳುತ್ತೇನೆ. ರಮೇಶ್ ಜಾರಕಿಹೊಳಿಗೆ ಉನ್ನತ ಸ್ಥಾನ ಕೊಟ್ಟರೆ ನಮ್ಮ ಭಾಗದಲ್ಲಿ ಹೆಚ್ಚಿನ ಕೆಲಸ ಮಾಡುತ್ತಾರೆ. ನಮ್ಮದು ಸ್ವಾರ್ಥ ಇದೆ. ಅವರು ಮಂತ್ರಿ ಆದರೆ ನಮ್ಮ ಕ್ಷೇತ್ರದ ಕೆಲಸ ಆಗುತ್ತವೆ. ಹೀಗಾಗಿ ವರಿಷ್ಠರಲ್ಲಿ ವಿನಂತಿ ಸಹ ಮಾಡಿದ್ದೀವಿ ಅಂತ ಶಾಸಕ ಮಹೇಶ್ ಕುಮಟಳ್ಳಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments