Webdunia - Bharat's app for daily news and videos

Install App

ರಾಮೇಶ್ವರಂ ಕೆಫೆ ಆರೋಪಿ ಸುಳಿವು ಸಿಕ್ಕರೆ ಈ ನಂಬರ್ ಕರೆ ಮಾಡಬೇಕು

Krishnaveni K
ಗುರುವಾರ, 7 ಮಾರ್ಚ್ 2024 (13:24 IST)
Photo Courtesy: Twitter
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಆರೋಪಿ ಬಿಎಂಟಿಸಿ ಬಸ್‍ ನಲ್ಲಿ ಪ್ರಯಾಣಿಸಿದ್ದ ವಿಡಿಯೋಗಳನ್ನು ಪೊಲೀಸರು ಹೊರಹಾಕಿದ್ದಾರೆ. ಜೊತೆಗೆ ಆರೋಪಿಯ ಸ್ಕೆಚ್ ನ್ನೂ ಬಿಡುಗಡೆ ಮಾಡಲಾಗಿದೆ.

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಆರೋಪಿಯ ಪತ್ತೆಗಾಗಿ ಪೊಲೀಸರು ಸಾರ್ವಜನಿಕರ ಸಹಾಯಕ್ಕೆ ಆಗ್ರಹಿಸಿದ್ದಾರೆ. ಈಗಾಗಲೇ ಆರೋಪಿಯ ಫೋಟೋ ಬಿಡುಗಡೆ ಮಾಡಿರುವ ಪೊಲೀಸರು ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ ಘೋಷಿಸಿದ್ದರು.

ಕನ್ನಡಕ ಧರಿಸಿದ್ದ ಆರೋಪಿ ಟೋಪಿಯನ್ನೂ ಹಾಕಿಕೊಂಡಿದ್ದ. ಹೊರಗೆ ಓಡಾಡುವಾಗ ಮಾಸ್ಕ್ ಧರಿಸಿ ತನ್ನ ಗುರುತು ಸಿಗದಂತೆ ನೋಡಿಕೊಂಡಿದ್ದ. ಆದರೆ ಬಿಎಂಟಿಸಿ ಬಸ್ ನಲ್ಲಿ ಮಾಸ್ಕ್ ತೆಗೆದಿದ್ದ. ಹೀಗಾಗಿ ಆತನ ಮುಖ ಚಹರೆ ಪತ್ತೆಯಾಗಿದೆ. ಹೀಗಾಗಿ ಅದನ್ನು ಅನುಸರಿಸಿ ಸ್ಕೆಚ್ ಒಂದನ್ನು ಬರೆದು ಪೊಲೀಸರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಸ್ಕೆಚ್ ಮಾಡುವಾಗಲೂ ಪೊಲೀಸರು ಒಂದು ಮಾಸ್ಕ್ ಧರಿಸಿ ಮತ್ತೊಂದು ಮಾಸ್ಕ್ ಧರಿಸದೇ ಚಿತ್ರ ಬಿಡಿಸಿ ಪ್ರಕಟಿಸಿದ್ದಾರೆ. ಇದರಿಂದಾಗಿ ಯಾವುದೇ ಆಂಗಲ್ ನಲ್ಲಿ ಆರೋಪಿ ಬಗ್ಗೆ ಸುಳಿವು ಸಿಕ್ಕರೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಬಹುದು ಎಂಬುದು ಇದರ ಹಿಂದಿನ ಉದ್ದೇಶ. ಈ ಶಂಕಿತ ಉಗ್ರನ ಬಗ್ಗೆ ಸುಳಿವು ಸಿಕ್ಕರೆ 080-29510900, 8904241100 ಎಂಬ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

Thailand vs Cambodia war:ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಬಂದ್: ಡೊನಾಲ್ಡ್ ಟ್ರಂಪ್ ಬೆದರಿಕೆ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ಮುಂದಿನ ಸುದ್ದಿ
Show comments