Daily Horoscope

ರಾಮೇಶ್ವರಂ ಕೆಫೆ ಸ್ಪೋಟ: ಮೊಹಮ್ಮದ್ ಶಬ್ಬೀರ್ ಎಂಬಾತನ ಅರೆಸ್ಟ್ ಮಾಡಿದ ಎನ್ ಐಎ

Krishnaveni K
ಬುಧವಾರ, 13 ಮಾರ್ಚ್ 2024 (14:34 IST)
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಮೊಹಮ್ಮದ್ ಶಬ್ಬೀರ್ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.

ಈತ ಬಳ್ಳಾರಿ ಮೂಲದವನು ಎನ್ನಲಾಗಿದೆ. ಇಂದು ಮುಂಜಾನೆ ಆತನನ್ನು ಬಂಧಿಸಲಾಗಿದ್ದು, ಬೆಂಗಳೂರಿಗೆ ಹೆಚ್ಚಿನ ವಿಚಾರಣೆಗೆ ಕರೆದುಕೊಂಡು ಬರಲಾಗುತ್ತಿದೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ ಐಎ ಘೋಷಣೆ ಮಾಡಿತ್ತು.

ಇದೀಗ ಬಂಧಿತನಾಗಿರುವ ಶಬ್ಬೀರ್ ತೋರಣಗಲ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನಿಗೂ ರಾಮೇಶ್ವರಂ ಸ್ಪೋಟಕ್ಕೂ ನಂಟಿರಬಹುದು ಎಂದು ಶಂಕಿಸಲಾಗಿದೆ. ಮಾರ್ಚ್ 01 ರಂದು ಸುಮಾರು 9 ಗಂಟೆಗೆ ಈತ ಶಂಕಿತ ಉಗ್ರನನ್ನು ಭೇಟಿಯಾಗಿದ್ದ. ಹೀಗಾಗಿ ಈತನ ಮೇಲೆ ಸಂಶಯ ಹೆಚ್ಚಾಗಿದೆ.

 ಬಳ್ಳಾರಿ ಹೊಸ ಬಸ್ ನಿಲ್ದಾಣದಿಂದ ಬುಡಾ ಕಾಂಪ್ಲೆಕ್ಸ್ ಬಳಿ ಆಟೋದಲ್ಲಿ ಬಂದಿಳಿದು ಶಂಕಿತ ಉಗ್ರನನ್ನು ಈತ ಭೇಟಿಯಾಗಿದ್ದ. ಶಬ್ಬೀರ್ ನ ಅಣ್ಣನ ಮಕ್ಕಳಿಂದ ಬಾಂಬರ್ ನ ಪರಿಚಯವಾಗಿತ್ತು ಎನ್ನಲಾಗಿದೆ. ಇದೀಗ ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತ ಉಗ್ರ ನೆರೆಯ ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments