Webdunia - Bharat's app for daily news and videos

Install App

ರಾಮೇಶ್ವರಂ ಕೆಫೆ ಸ್ಪೋಟ: ಮೊಹಮ್ಮದ್ ಶಬ್ಬೀರ್ ಎಂಬಾತನ ಅರೆಸ್ಟ್ ಮಾಡಿದ ಎನ್ ಐಎ

Krishnaveni K
ಬುಧವಾರ, 13 ಮಾರ್ಚ್ 2024 (14:34 IST)
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಅಧಿಕಾರಿಗಳು ಮೊಹಮ್ಮದ್ ಶಬ್ಬೀರ್ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ.

ಈತ ಬಳ್ಳಾರಿ ಮೂಲದವನು ಎನ್ನಲಾಗಿದೆ. ಇಂದು ಮುಂಜಾನೆ ಆತನನ್ನು ಬಂಧಿಸಲಾಗಿದ್ದು, ಬೆಂಗಳೂರಿಗೆ ಹೆಚ್ಚಿನ ವಿಚಾರಣೆಗೆ ಕರೆದುಕೊಂಡು ಬರಲಾಗುತ್ತಿದೆ. ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಯ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ ಐಎ ಘೋಷಣೆ ಮಾಡಿತ್ತು.

ಇದೀಗ ಬಂಧಿತನಾಗಿರುವ ಶಬ್ಬೀರ್ ತೋರಣಗಲ್ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನಿಗೂ ರಾಮೇಶ್ವರಂ ಸ್ಪೋಟಕ್ಕೂ ನಂಟಿರಬಹುದು ಎಂದು ಶಂಕಿಸಲಾಗಿದೆ. ಮಾರ್ಚ್ 01 ರಂದು ಸುಮಾರು 9 ಗಂಟೆಗೆ ಈತ ಶಂಕಿತ ಉಗ್ರನನ್ನು ಭೇಟಿಯಾಗಿದ್ದ. ಹೀಗಾಗಿ ಈತನ ಮೇಲೆ ಸಂಶಯ ಹೆಚ್ಚಾಗಿದೆ.

 ಬಳ್ಳಾರಿ ಹೊಸ ಬಸ್ ನಿಲ್ದಾಣದಿಂದ ಬುಡಾ ಕಾಂಪ್ಲೆಕ್ಸ್ ಬಳಿ ಆಟೋದಲ್ಲಿ ಬಂದಿಳಿದು ಶಂಕಿತ ಉಗ್ರನನ್ನು ಈತ ಭೇಟಿಯಾಗಿದ್ದ. ಶಬ್ಬೀರ್ ನ ಅಣ್ಣನ ಮಕ್ಕಳಿಂದ ಬಾಂಬರ್ ನ ಪರಿಚಯವಾಗಿತ್ತು ಎನ್ನಲಾಗಿದೆ. ಇದೀಗ ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಂಕಿತ ಉಗ್ರ ನೆರೆಯ ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments