Webdunia - Bharat's app for daily news and videos

Install App

ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ: ಬಾಂಬರ್‌ ಸುಳಿವು ಕೊಟ್ಟವರಿಗೆ ₹10ಲಕ್ಷ ಬಹುಮಾನ

Sampriya
ಶುಕ್ರವಾರ, 29 ಮಾರ್ಚ್ 2024 (19:32 IST)
ಬೆಂಗಳೂರು: ನಗರದ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ಎನ್‌ಐಎ ಭರ್ಜರಿ ಬಹುಮಾನ ಘೋಷಣೆ ಮಾಡಿದೆ.

ಇದೀಗ ಶಂಕಿತರ ಫೋಟೋ ಮತ್ತು ಅವರ ವಿವರಗಳನ್ನು ಸ್ಪಷ್ಟವಾಗಿ ಬಿಡುಗಡೆಗೊಳಿಸಿರುವ ಎನ್​ಐಎ, ವಾಟೆಂಡ್ ಲಿಸ್ಟ್​ನಲ್ಲಿರುವವರನ್ನು ಹುಡುಕಿಕೊಟ್ಟವರಿಗೆ ₹10 ಲಕ್ಷ ನಗದು ಹಣವನ್ನು ಬಹುಮಾನವಾಗಿ ಘೋಷಣೆ ಮಾಡಿದೆ.

ಈಗಾಗಲೇ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ನಿನ್ನೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದರು. ಆರೆಸ್ಟ್ ಆದವನನ್ನು ಮುಜಮ್ಮಿಲ್ ಶರೀಫ್ ಎಂದು ಗುರುತಿಸಲಾಗಿದೆ. ‌ಇದರ ಬೆನ್ನಲ್ಲೇ ಇದೀಗ ಶಂಕಿತರ ಫೋಟೋ ಬಿಡುಗಡೆಗೊಳಿಸಿದ ಎನ್‌ಐಎ, ಆರೋಪಿಗಳನ್ನು ಹುಡುಕಿಕೊಟ್ಟವರಿಗೆ ಭರ್ಜರಿ ನಗದು ಬಹುಮಾನ ಘೋಷಣೆ ಮಾಡಿದೆ.

ಬುಧವಾರ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ಭಾರಿ ದಾಳಿ ನಡೆಸಿದ್ದ ನಂತರ ಪ್ರಮುಖ ಸಂಚುಕೋರನನ್ನು ಎನ್​ಐಎ ತಂಡ ಬಂಧಿಸಿತು. ರಾಜ್ಯದಲ್ಲಿ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಎನ್‌ಐಎ ಅಧಿಕಾರಿಗಳು ಬಿರುಸಿನ ಕಾರ್ಯಾಚರಣೆ ನಡೆಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments