Publish Date: Thu, 28 Mar 2024 (20:50 IST)
Updated Date: Thu, 28 Mar 2024 (20:54 IST)
ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂಧಿಸಿದ್ದಾರೆ.
ಎರಡು ದಿನಗಳಲ್ಲಿ ರಾಜ್ಯದ ಹಲವೆಡೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದರು. ಬಂಧಿತ ಆರೋಪಿಯನ್ನು ಮುಝಮ್ಮಿಲ್ ಶರೀಫ್ ಎಂದು ಗುರುತಿಸಲಾಗಿದೆ.
ಈತನಿಗಾಗಿ ಎನ್ಎಐ ಅಧಿಕಾರಿಗಳು ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದರು. ಈತ ಬ್ಲಾಸ್ಟ್ಗೆ ಬಳಸಿದ್ದ ಬಾಂಬ್ ತಯಾರಿಸಲು ಪ್ರಮುಖ ಪಾತ್ರ ವಹಿಸಿದ್ದ. ಅಲ್ಲದೇ ಮುಸಾವೀರ್ ಹುಸೇನ್ಗೆ ತುಂಬಾ ಆಪ್ತನಾಗಿದ್ದ ಎಂದು ತಿಳಿದು ಬಂದಿದೆ.
ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲಾಗುವುದು ಎಂದು ಎನ್ಎಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.