ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ರಾಜ್ಯದ ಹಲವೆಡೆ ಎನ್‌ಐಎ ದಾಳಿ

Sampriya
ಬುಧವಾರ, 27 ಮಾರ್ಚ್ 2024 (15:43 IST)
Photo Courtesy X
ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು, ಶಿವಮೊಗ್ಗ ಹುಬ್ಬಳಿಯಲ್ಲಿ ಏಕಕಾಲಕ್ಕೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಧಿಕಾರಿಗಳು ಐದು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ. ಅಬ್ದುಲ್ ಮತೀನ್, ಬಾಂಬರ್ ಮುಸಾವೀರ್ ಹುಸೇನ್, ಬಾಂಬರ್‌ಗೆ ಸಹಾಯ ಮಾಡಿದ ಸರ್ದಾರ್ ನವೀದ್ ಸೇರಿದಂತೆ ಅನೇಕರ ಮನೆ ಮೇಲೆ ದಾಳಿ ಪರಿಶೀಲನೆ ನಡೆಸಿದ್ದಾರೆ.

ಬಾಂಬರ್ ಮುಸಾವೀರ್ ಹುಸೇನ್ ಚೆನ್ನೈನಿಂದ ಬಂದಾಗ, ಮತೀನ್‌, ನವೀದ್‌ ಸಹಾಯ ಮಾಡಿದ್ದರು ಎಂದು ಹೇಳಲಾಗಿದೆ. ಸದ್ಯ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ ಮಾಹಿತಿ ಕಲೆಹಾಕುತ್ತಿದ್ದಾರೆ.

ಚೆನ್ನೈನ ಮೂರು ಕಡೆ ಕೂಡ ಎನ್​ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಶಂಕಿತರ ಶೋಧ ನಡೆಸಿದೆ. ಉಗ್ರರಿಗೆ ಹಣದ ನೆರವು, ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಿದೆ. ತಮಿಳುನಾಡಿನಲ್ಲಿ ನಡೆದಿರುವ ಎನ್‌ಐಎ ದಾಳಿ ಕೂಡ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ್ದೇ ಆಗಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗ್ತಾರಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

ಚೆಲುವರಾಯಸ್ವಾಮಿ ನೇತೃತ್ವದಲ್ಲಿ ದೆಹಲಿಗೆ ಕೈ ನಾಯಕರ ದಂಡು

ಬಿಬಿಎಂಪಿ ಖಾತಾ ಸರ್ಟಿಫಿಕೇಟ್ ಆನ್ ಲೈನ್ ನಲ್ಲಿ ಪಡೆಯುವುದು ಹೇಗೆ

Gen Z ಗಾಗಿ ಅಂಚೆ ಇಲಾಖೆಯಿಂದ ಹೊಸ ಪ್ಲ್ಯಾನ್: ಇಲ್ಲಿದೆ ಡೀಟೈಲ್ಸ್

ಗಮನಿಸಿ: MGNREGA ಯೋಜನೆಗೆ ದೊಡ್ಡ ಬದಲಾವಣೆ ತಂದ ಕೇಂದ್ರ ಸರ್ಕಾರ, ಕಾರ್ಮಿಕರಿಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments