Publish Date: Thu, 07 Jun 2018 (16:01 IST)
Updated Date: Thu, 07 Jun 2018 (16:03 IST)
ಮಾಜಿ ಗೃಹ ಸಚಿವ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕಾಗಿ ರೆಡ್ಡಿ ಸಮುದಾಯದಿಂದ ಭಾರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಮಲಿಂಗಾರೆಡ್ಡಿ ರವರಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಚಂದಾಪುರ ರಾಷ್ಟ್ರೀಯ ಹೆದ್ದಾರಿ ಹೊಂದಿಕೊಂಡಿರುವ ಹೆನ್ನಾಗರ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿರುವ ಪ್ರತಿಭಟನೆಕಾರರನ್ನ ಮನವೊಲಿಸಲು ಪೊಲೀಸರು ಮುಂದಾಗಿದ್ದಾರೆ. ಪ್ರತಿಭಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಎರಡು ಕಡೆ ಬಂದ್ ಆಗಿದ್ದರಿಂದ ಸಾರಿಗೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸುಮಾರು 5 ಕಿ.ಮೀ ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲುವಂತಹ ಪರಿಸ್ಥಿತಿ ಎದುರಾಗಿತ್ತು ಎಂದು ಮೂಲಗಳು ತಿಳಿಸಿವೆ.