Webdunia - Bharat's app for daily news and videos

Install App

ರಾಮನಗರ ಬಂದ್ಗೆ ಕರೆ : ಮೆಡಿಕಲ್ ಕಾಲೇಜ್ ಸ್ಥಳಾಂತರಕ್ಕೆ ಆಕ್ರೋಶ

Webdunia
ಸೋಮವಾರ, 4 ಸೆಪ್ಟಂಬರ್ 2023 (09:26 IST)
ರಾಮನಗರ : ರಾಜೀವ್ ಗಾಂಧಿ ಮೆಡಿಕಲ್ ಕಾಲೇಜ್ ಸ್ಥಳಾಂತರ ವಿಚಾರವಾಗಿ ಸೆ.8 ರಂದು ರಾಮನಗರ ಬಂದ್ಗೆ ಕೆಂಗಲ್ ಹನುಮಂತಯ್ಯ ಮೆಡಿಕಲ್ ಕಾಲೇಜ್ ಹೋರಾಟ ಸಮಿತಿ ಕರೆ ನೀಡಿದೆ. ಬಂದ್ಗೆ ಸಾರ್ವಜನಿಕರು ಸಹಕಾರ ನೀಡುವಂತೆ ಅಂಗಡಿ ಮುಂಗ್ಗಟ್ಟು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ತವರು ಜಿಲ್ಲೆಯಲ್ಲೇ ಈ ಬಗ್ಗೆ ಆಕ್ರೋಶ ಹೆಚ್ಚಾಗಿದೆ. ಕನಕಪುರಕ್ಕೆ ಮೆಡಿಕಲ್ ಕಾಲೇಜ್ ಸ್ಥಳಾಂತರ ಮಾಡಬಾರದು. ಸರ್ಕಾರ ನಿಮ್ಮದೇ ಇದೆ. ನಿಮಗೆ ಅಧಿಕಾರ ಇದೆ.

ಕನಕಪುರಕ್ಕೆ ಬೇಕಿದ್ದರೆ ಮತ್ತೊಂದು ಮೆಡಿಕಲ್ ಕಾಲೇಜನ್ನು ಮಂಜೂರು ಮಾಡಿಕೊಳ್ಳಿ. ಆದರೆ ರಾಮನಗರಕ್ಕೆ ಮಂಜೂರಾಗಿರುವ ಕಾಲೇಜನ್ನು ಯಾವುದೇ ಕಾರಣಕ್ಕೂ ಜಿಲ್ಲಾ ಕೇಂದ್ರದಿಂದ ಸ್ಥಳಾಂತರ ಮಾಡಬಾರದು ಎಂಬುದು ಹೋರಾಟಗಾರರ ಒತ್ತಾಯವಾಗಿದೆ.

ಈ ಹಿನ್ನೆಲೆಯಲ್ಲಿ ಇದೇ ಸೆ.8ರಂದು ರಾಮನಗರ ಬಂದ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುತ್ತದೆ. ಇದಕ್ಕೂ ಸರ್ಕಾರ ಸ್ಪಂದಿಸದೇ ಇದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟ ಮಾಡುವ ಎಚ್ಚರಿಕೆಯನ್ನೂ ನೀಡಲಾಗಿದೆ.

ಜನಜಾಗೃತಿಗಾಗಿ ಇಂದಿನಿಂದ ಪೋಸ್ಟರ್ ಚಳವಳಿ ಆರಂಭಿಸಲಾಗಿದೆ. ಬಂದ್ಗೆ ಎಲ್ಲಾ ಕನ್ನಡಪರ ಸಂಘಟನೆಗಳು, ಕಾರ್ಮಿಕ, ದಲಿತ ಮತ್ತು ಜವಳಿ ಸಂಘಟನೆಗಳು ಬೆಂಬಲ ಘೋಷಿಸಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments