Select Your Language

Notifications

webdunia
webdunia
webdunia
webdunia

ಪ್ರಿಯಾಂಕ್ ಖರ್ಗೆ ವಿರುದ್ಧ ರಾಮುಲು ವಾಗ್ದಾಳಿ

ಪ್ರಿಯಾಂಕ್ ಖರ್ಗೆ
ಸರ್ಕಾರದಲ್ಲಿ ಉದ್ಯೋಗ ಪಡೆಯಲು ಮಂಚ ಹತ್ತಬೇಕು ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಬಳ್ಳಾರಿಯಲ್ಲಿ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ಪ್ರಿಯಾಂಕ್​ ಖರ್ಗೆ ತಮ್ಮ ತಂದೆಯ ಸಂಸ್ಕಾರವನ್ನು ಬೆಳೆಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ..ಲಂಚ, ಮಂಚ ಅಂತ ಹೇಳುವುದು ಹೀನಾಯ ಸಂಸ್ಕೃತಿಯನ್ನು ತೋರಿಸುತ್ತದೆ. ಈ ಹೇಳಿಕೆಯು ಕಾಂಗ್ರೆಸ್​ ಪಕ್ಷದ ಹೀನಾಯ ಸಂಸ್ಕೃತಿಯನ್ನ ತೋರಿಸುತ್ತದೆ. ಪ್ರಿಯಾಂಕ್​ ಖರ್ಗೆ ಸಂಸ್ಕಾರವಂತ ಅಂತ ಅಂದುಕೊಂಡಿದ್ದೆ. ಈ ಹಿಂದೆ ಸದನದಲ್ಲಿ ಸಣ್ಣ ಖರ್ಗೆ ಅಂತಾ ಉಲ್ಲೇಖಿಸಿ ಹೊಗಳಿದ್ದೆ. ಆದರೆ ಅವರು ತಮ್ಮ ತಂದೆಯನ್ನು ನೋಡಿ ಕಲಿಯಬೇಕು. ಪ್ರಿಯಾಂಕ್ ಅವರ ತಂದೆ ಬುದ್ದಿವಂತರು. ದಲಿತ ನಾಯಕರ ಮಗನಾಗಿ ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ. ಶಕ್ತಿ ಇದ್ದರೆ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಯತ್ನಿಸಲಿ. ಮಹಿಳೆಯರ ವಿರುದ್ಧ ಇಂತಹ ಮಾತು ಬಳಕೆ ಆಗಬಾರದು. ಕೂಡಲೇ ಪ್ರಿಯಾಂಕ್​ ಖರ್ಗೆ ಅವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ಸಭೆಯಲ್ಲಿ ಬೊಮ್ಮಾಯಿ ಸುಳಿವು