Select Your Language

Notifications

webdunia
webdunia
webdunia
webdunia

ಪ್ರಿಯಾಂಕ್ ಖರ್ಗೆ ವಿರುದ್ಧ ರಾಮುಲು ವಾಗ್ದಾಳಿ

ಪ್ರಿಯಾಂಕ್ ಖರ್ಗೆ ವಿರುದ್ಧ ರಾಮುಲು ವಾಗ್ದಾಳಿ
ಬಳ್ಳಾರಿ , ಶನಿವಾರ, 13 ಆಗಸ್ಟ್ 2022 (17:43 IST)
ಸರ್ಕಾರದಲ್ಲಿ ಉದ್ಯೋಗ ಪಡೆಯಲು ಮಂಚ ಹತ್ತಬೇಕು ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಬಳ್ಳಾರಿಯಲ್ಲಿ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ಪ್ರಿಯಾಂಕ್​ ಖರ್ಗೆ ತಮ್ಮ ತಂದೆಯ ಸಂಸ್ಕಾರವನ್ನು ಬೆಳೆಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ..ಲಂಚ, ಮಂಚ ಅಂತ ಹೇಳುವುದು ಹೀನಾಯ ಸಂಸ್ಕೃತಿಯನ್ನು ತೋರಿಸುತ್ತದೆ. ಈ ಹೇಳಿಕೆಯು ಕಾಂಗ್ರೆಸ್​ ಪಕ್ಷದ ಹೀನಾಯ ಸಂಸ್ಕೃತಿಯನ್ನ ತೋರಿಸುತ್ತದೆ. ಪ್ರಿಯಾಂಕ್​ ಖರ್ಗೆ ಸಂಸ್ಕಾರವಂತ ಅಂತ ಅಂದುಕೊಂಡಿದ್ದೆ. ಈ ಹಿಂದೆ ಸದನದಲ್ಲಿ ಸಣ್ಣ ಖರ್ಗೆ ಅಂತಾ ಉಲ್ಲೇಖಿಸಿ ಹೊಗಳಿದ್ದೆ. ಆದರೆ ಅವರು ತಮ್ಮ ತಂದೆಯನ್ನು ನೋಡಿ ಕಲಿಯಬೇಕು. ಪ್ರಿಯಾಂಕ್ ಅವರ ತಂದೆ ಬುದ್ದಿವಂತರು. ದಲಿತ ನಾಯಕರ ಮಗನಾಗಿ ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ. ಶಕ್ತಿ ಇದ್ದರೆ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಯತ್ನಿಸಲಿ. ಮಹಿಳೆಯರ ವಿರುದ್ಧ ಇಂತಹ ಮಾತು ಬಳಕೆ ಆಗಬಾರದು. ಕೂಡಲೇ ಪ್ರಿಯಾಂಕ್​ ಖರ್ಗೆ ಅವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ಸಭೆಯಲ್ಲಿ ಬೊಮ್ಮಾಯಿ ಸುಳಿವು