Webdunia - Bharat's app for daily news and videos

Install App

ಪ್ರಿಯಾಂಕ್ ಖರ್ಗೆ ವಿರುದ್ಧ ರಾಮುಲು ವಾಗ್ದಾಳಿ

Webdunia
ಶನಿವಾರ, 13 ಆಗಸ್ಟ್ 2022 (17:43 IST)
ಸರ್ಕಾರದಲ್ಲಿ ಉದ್ಯೋಗ ಪಡೆಯಲು ಮಂಚ ಹತ್ತಬೇಕು ಎಂಬ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗುತ್ತಿದೆ. ಬಳ್ಳಾರಿಯಲ್ಲಿ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಚಿವ ಶ್ರೀರಾಮುಲು, ಪ್ರಿಯಾಂಕ್​ ಖರ್ಗೆ ತಮ್ಮ ತಂದೆಯ ಸಂಸ್ಕಾರವನ್ನು ಬೆಳೆಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ..ಲಂಚ, ಮಂಚ ಅಂತ ಹೇಳುವುದು ಹೀನಾಯ ಸಂಸ್ಕೃತಿಯನ್ನು ತೋರಿಸುತ್ತದೆ. ಈ ಹೇಳಿಕೆಯು ಕಾಂಗ್ರೆಸ್​ ಪಕ್ಷದ ಹೀನಾಯ ಸಂಸ್ಕೃತಿಯನ್ನ ತೋರಿಸುತ್ತದೆ. ಪ್ರಿಯಾಂಕ್​ ಖರ್ಗೆ ಸಂಸ್ಕಾರವಂತ ಅಂತ ಅಂದುಕೊಂಡಿದ್ದೆ. ಈ ಹಿಂದೆ ಸದನದಲ್ಲಿ ಸಣ್ಣ ಖರ್ಗೆ ಅಂತಾ ಉಲ್ಲೇಖಿಸಿ ಹೊಗಳಿದ್ದೆ. ಆದರೆ ಅವರು ತಮ್ಮ ತಂದೆಯನ್ನು ನೋಡಿ ಕಲಿಯಬೇಕು. ಪ್ರಿಯಾಂಕ್ ಅವರ ತಂದೆ ಬುದ್ದಿವಂತರು. ದಲಿತ ನಾಯಕರ ಮಗನಾಗಿ ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ. ಶಕ್ತಿ ಇದ್ದರೆ ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಯತ್ನಿಸಲಿ. ಮಹಿಳೆಯರ ವಿರುದ್ಧ ಇಂತಹ ಮಾತು ಬಳಕೆ ಆಗಬಾರದು. ಕೂಡಲೇ ಪ್ರಿಯಾಂಕ್​ ಖರ್ಗೆ ಅವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ರಾಜ್ಯ ರಾಜಧಾನಿಯ ಟ್ರಾಫಿಕ್‌ ಕಿರಿಕಿರಿ ತಪ್ಪಿಸಲು ಶಾಲಾ ಸಮಯ ಬದಲಾಯಿಸಲು ಶಿಕ್ಷಣ ಇಲಾಖೆ ಸಿದ್ಧತೆ

ಮುಂದಿನ ಸುದ್ದಿ
Show comments