Select Your Language

Notifications

webdunia
webdunia
webdunia
webdunia

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಪದ್ಮಾವತಿ.....

ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಪದ್ಮಾವತಿ.....
ಮಂಗಳೂರು , ಶುಕ್ರವಾರ, 26 ಆಗಸ್ಟ್ 2016 (17:30 IST)
ಪಾಕಿಸ್ತಾನ ಪರ ಹೇಳಿಕೆ ನೀಡಿ ಸಾಕಷ್ಟು ವಿವಾದಕ್ಕೆ ಕಾರಣರಾಗಿದ್ದ ಮಾಜಿ ಸಂಸದೆ ಹಾಗೂ ನಟಿ ರಮ್ಯಾ, ಇದೀಗ ಮತ್ತೊಂದು ವಿವಾದಾಸ್ಪದ ಹೇಳಿಕೆಯನ್ನು ಸ್ಫೋಟಿಸಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಶಾಂತಿ ಕದಡಲಾಗುತ್ತಿದೆ. ಈ ಕುರಿತು ಪತ್ರಿಕೆಯನ್ನು ಓದಿ ಮನಸ್ಸಿಗೆ ತುಂಬಾ ಬೇಜಾರಾಗಿದೆ. ಎಲ್ಲೆಡೆಯೂ ಹಿಂಸಾಚಾರ ಎಸಗುವ ಜನರಿರುತ್ತಾರೆ. ಆದರೆ, ಇಲ್ಲಿಯ ಕೆಲವು ಒಳ್ಳೆಯ ಜನರ ಪ್ರೀತಿಯನ್ನು ಗೌರವಿಸುತ್ತೇನೆ. ನನ್ನನ್ನು ಮಂಗಳೂರಿಗೆ ಸ್ವಾಗತಿಸಿರುವ ಜನರಿಗೆ ನಾನು ಚಿರಋಣಿ ಎಂದು ಹೇಳಿದರು.
 
ನಾನು ಚುನಾವಣಾ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಿಲ್ಲ. ಯಾಕೆಂದರೆ, ಜನರು ಘಟನೆಗಳನ್ನು ಬೇಗ ಮರೆತು ಹೋಗುತ್ತಾರೆ ಎಂದು ಹೇಳಿದರು. ಮಂಗಳೂರಿನ ಗೋಲಿಬಜೆ, ಪಬ್ಬಾಸ್ ಐಸ್‌ಕ್ರೀಂ ಅಂದ್ರೆ ನನಗಿಷ್ಟ ಎಂದು ಹೇಳಿದರು.
 
ಕೇಂದ್ರ ಸಚಿವ ಮನೋಹರ್ ಪರಿಕ್ಕರ್ ಅವರು ಪಾಕಿಸ್ತಾನ ನರಕವಿದ್ದಂತೆ ಅಂತಾ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ನಟಿ ರಮ್ಯಾ ಅವರು ಪಾಕಿಸ್ತಾನದಲ್ಲಿ ಹಾಗೇನಿಲ್ಲ. ಅಲ್ಲಿನ ಜನರು ನಮ್ಮಂತೆ ಒಳ್ಳೆಯವರು ಅಂತಾ ಹೇಳುವ ಮೂಲಕ ಪಾಕಿಸ್ತಾನವನ್ನು ಹಾಡಿ ಹೊಗಳಿದ್ದು ಇತ್ತೀಚೆಗಷ್ಟೇ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇಷ್ಟವಾಗದ ವ್ಯಕ್ತಿಯೊಂದಿಗೆ ವಿವಾಹ: ಪತಿಯ ಗುಪ್ತಾಂಗಕ್ಕೆ ಬೆಂಕಿ ಹಚ್ಚಿದ ಮಹಾಪತ್ನಿ