Webdunia - Bharat's app for daily news and videos

Install App

ರಮ್ಯಾಗೆ ಎಐಸಿಸಿಯಿಂದ ಸಿಗಲಿದೆಯಂತೆ ಬಿಗ್ ಗಿಫ್ಟ್…!

Webdunia
ಮಂಗಳವಾರ, 17 ಅಕ್ಟೋಬರ್ 2017 (10:00 IST)
ಬೆಂಗಳೂರು: ಸದ್ಯ ರಮ್ಯಾ ರಾಷ್ಟ್ರೀಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆಯಾಗಿ ಕೆಲಸ ಮಾಡ್ತಿದ್ದಾರೆ. ಇನ್ನೇನು 2018 ಚುನಾವಣೆಗೆ ಸ್ವಲ್ಪ ದಿನವೇ ಬಾಕಿಯಿದೆ. ಇದರ ನಡುವೆ ರಾಜ್ಯರಾಜಕಾರಣಕ್ಕೆ ರಮ್ಯಾ ವಾಪಸ್ ಬರ್ತಾರ ಅನ್ನೋ ಚರ್ಚೆ ಶುರುವಾಗಿದೆ.

ನಿನ್ನೆ ಎಐಸಿಸಿ ಬಿಡುಗಡೆ ಮಾಡಿರುವ ರಾಜ್ಯ ಕೆಪಿಸಿಸಿ ಕಾರ್ಯಕಾರಿಣಿ ಸಮಿತಿಯಲ್ಲಿ ಮೋಹಕ ತಾರೆ ರಮ್ಯಾಗೂ ಸ್ಥಾನ ನೀಡಲಾಗಿದೆ. 94 ನೂತನ ಕಾರ್ಯಕಾರಿಣಿ ಸದಸ್ಯರ ಪಟ್ಟಿಯಲ್ಲಿ ಮಂಡ್ಯ ಜಿಲ್ಲೆಯಿಂದ ರಮ್ಯಾರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಹೀಗಾಗಿ ರಮ್ಯಾ ಮತ್ತೆ ರಾಜ್ಯ ರಾಜಕಾರಣಕ್ಕೆ ಮತ್ತೆ ವಾಪಸ್ ಆಗುವ ಸಾ‍ಧ್ಯತೆಗಳು ಇವೆ ಎನ್ನಲಾಗ್ತಿದೆ.

ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾದ ಬಳಿಕ ಕಾಂಗ್ರೆಸ್ ಗೆ ಸಂಬಂಧಪಟ್ಟ ಸೋಷಿಯಲ್ ಮೀಡಿಯಾಗಳು ಹೆಚ್ಚು ಆ್ಯಕ್ಟೀವ್ ಆಗಿವೆ. ರಮ್ಯಾ ಕೂಡ ಈ ಮೂಲಕ ಚಾರ್ಮ್ ಹೆಚ್ಚಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ನಿದ್ದೆ ಬಿಟ್ಟು ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಟೀಂ, ನಿತ್ಯವೂ ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆ ಹರಿಸುತ್ತಿವೆ.

ಹೀಗಾಗಿ ಮುಂದೊಂದು ದಿನ ರಮ್ಯಾಗೆ ಎಐಸಿಸಿ ದೊಡ್ಡ ಹುದ್ದೆ ನೀಡಿದರೂ ಆಶ್ಚರ್ಯವಿಲ್ಲ. ಯಾಕಂದ್ರೆ ಸದ್ಯ ಕಾಂಗ್ರೆಸ್ ನಲ್ಲಿರುವ ಪವರ್ ಫುಲ್ ವುಮೆನ್ ಕ್ಯಾಂಡಿಡೇಟ್ ರಮ್ಯಾ ಮೇಡಂ. ಹೀಗಾಗಿ ಅವರ ಮಂತ್ರಿಯಾದರೂ, ಸಿಎಂ ಆದರೂ ಅಚ್ಚರಿ ಪಡಬೇಕಿಲ್ಲ ಎನ್ನಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments