ರಮ್ಯಾಗೆ ಎಐಸಿಸಿಯಿಂದ ಸಿಗಲಿದೆಯಂತೆ ಬಿಗ್ ಗಿಫ್ಟ್…!

Webdunia
ಮಂಗಳವಾರ, 17 ಅಕ್ಟೋಬರ್ 2017 (10:00 IST)
ಬೆಂಗಳೂರು: ಸದ್ಯ ರಮ್ಯಾ ರಾಷ್ಟ್ರೀಯ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥೆಯಾಗಿ ಕೆಲಸ ಮಾಡ್ತಿದ್ದಾರೆ. ಇನ್ನೇನು 2018 ಚುನಾವಣೆಗೆ ಸ್ವಲ್ಪ ದಿನವೇ ಬಾಕಿಯಿದೆ. ಇದರ ನಡುವೆ ರಾಜ್ಯರಾಜಕಾರಣಕ್ಕೆ ರಮ್ಯಾ ವಾಪಸ್ ಬರ್ತಾರ ಅನ್ನೋ ಚರ್ಚೆ ಶುರುವಾಗಿದೆ.

ನಿನ್ನೆ ಎಐಸಿಸಿ ಬಿಡುಗಡೆ ಮಾಡಿರುವ ರಾಜ್ಯ ಕೆಪಿಸಿಸಿ ಕಾರ್ಯಕಾರಿಣಿ ಸಮಿತಿಯಲ್ಲಿ ಮೋಹಕ ತಾರೆ ರಮ್ಯಾಗೂ ಸ್ಥಾನ ನೀಡಲಾಗಿದೆ. 94 ನೂತನ ಕಾರ್ಯಕಾರಿಣಿ ಸದಸ್ಯರ ಪಟ್ಟಿಯಲ್ಲಿ ಮಂಡ್ಯ ಜಿಲ್ಲೆಯಿಂದ ರಮ್ಯಾರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಹೀಗಾಗಿ ರಮ್ಯಾ ಮತ್ತೆ ರಾಜ್ಯ ರಾಜಕಾರಣಕ್ಕೆ ಮತ್ತೆ ವಾಪಸ್ ಆಗುವ ಸಾ‍ಧ್ಯತೆಗಳು ಇವೆ ಎನ್ನಲಾಗ್ತಿದೆ.

ರಮ್ಯಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆಯಾದ ಬಳಿಕ ಕಾಂಗ್ರೆಸ್ ಗೆ ಸಂಬಂಧಪಟ್ಟ ಸೋಷಿಯಲ್ ಮೀಡಿಯಾಗಳು ಹೆಚ್ಚು ಆ್ಯಕ್ಟೀವ್ ಆಗಿವೆ. ರಮ್ಯಾ ಕೂಡ ಈ ಮೂಲಕ ಚಾರ್ಮ್ ಹೆಚ್ಚಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ನಿದ್ದೆ ಬಿಟ್ಟು ಕೆಲಸ ಮಾಡುತ್ತಿರುವ ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಟೀಂ, ನಿತ್ಯವೂ ಬಿಜೆಪಿ ವಿರುದ್ಧ ಟೀಕೆಗಳ ಸುರಿಮಳೆ ಹರಿಸುತ್ತಿವೆ.

ಹೀಗಾಗಿ ಮುಂದೊಂದು ದಿನ ರಮ್ಯಾಗೆ ಎಐಸಿಸಿ ದೊಡ್ಡ ಹುದ್ದೆ ನೀಡಿದರೂ ಆಶ್ಚರ್ಯವಿಲ್ಲ. ಯಾಕಂದ್ರೆ ಸದ್ಯ ಕಾಂಗ್ರೆಸ್ ನಲ್ಲಿರುವ ಪವರ್ ಫುಲ್ ವುಮೆನ್ ಕ್ಯಾಂಡಿಡೇಟ್ ರಮ್ಯಾ ಮೇಡಂ. ಹೀಗಾಗಿ ಅವರ ಮಂತ್ರಿಯಾದರೂ, ಸಿಎಂ ಆದರೂ ಅಚ್ಚರಿ ಪಡಬೇಕಿಲ್ಲ ಎನ್ನಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸಹಾಯಕರಾದ ಮಲ್ಲಿಕಾರ್ಜುನ ಖರ್ಗೆ: ಇನ್ನು ರಾಹುಲ್ ಗಾಂಧಿಯೇ ಬರಬೇಕು

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ಮುಂದಿನ ಸುದ್ದಿ
Show comments