ಯಲ್ಲಮ್ಮನ ಜಾತ್ರೆಯಲ್ಲಿ ಎಗ್ಗಿಲ್ಲದೇ ನಡೆಯಿತು ಜೂಜು

Webdunia
ಬುಧವಾರ, 20 ಫೆಬ್ರವರಿ 2019 (16:39 IST)
ಹಾಡು ಹಗಲಲ್ಲೇ ಜೂಜು ನಡೆಯುತ್ತಿದ್ದರೂ ಅಧಿಕಾರಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ.

ಹೊರರಾಜ್ಯದಿಂದ ಸವದತ್ತಿ ಯಲ್ಲಮ್ಮನಿಗೆ ಬರುವ ಭಕ್ತರ ಸಂಖ್ಯೆ ದಿನೆ ದಿನೇ ಹೆಚ್ಚುತ್ತಿದೆ. ಇನ್ನೊಂದೆಡೆ ಜೂಜಾಟ ರಾಜಾರೋಷವಾಗಿ ನಡೆದಿರುವುದು ಸ್ಥಳೀಯ ಭಕ್ತರನ್ನು ಕೆರಳಿಸಿದೆ.

 ಸ್ಥಳೀಯ ಅಧಿಕಾರಿ ಹಾಗೂ ರಾಜಕೀಯ ಮುಖಂಡರು ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಭಕ್ತಾಧಿಗಳು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ಕಡೆಯಿಂದ ಆಗಮಿಸಿರುವ ಈ ಜೂಜುಕೋರರಿಗೆ, ಪೊಲೀಸ್ ಇಲಾಖೆಯ ಭಯವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಅವರ ಮೇಲೆ ದೌರ್ಜನ್ಯಕ್ಕೆ ಮುಂದಾಗುತ್ತಿದ್ದಾರೆ. ಇತ್ತೀಚಿನ ದಿನದಲ್ಲಿ ಅಕ್ರಮಗಳ ತಾಣವಾಗಿ ಮಾರ್ಪಟ್ಟಿದ್ದರೂ ಸ್ಥಳೀಯ ಆಡಳಿತ ಕಿಂಚಿತ್ತೂ ತಲೆ ಕೆಡಿಸಿಕೊಳ್ಳದಿರುವುದು ಭಕ್ತರ ಅಸಮಧಾನಕ್ಕೆ ಕಾರಣವಾಗುತ್ತಿದೆ.

ಈ ಬಗ್ಗೆ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಸ್ಥಳೀಯರ ತೊಂದರೆ ಪರಿಹರಿಸಬೇಕು ಎಂದು ಭಕ್ತಾಧಿಗಳು ಆಗ್ರಹಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ: ಸಚಿವ ಡ್ಯಾನಿಶ್ ಆಜಾದ್ ಅನ್ಸಾರಿ

ಮುಖ್ಯ ಕಾರ್ಯದರ್ಶಿ ಸಚಿವಸಂಪುಟ ದರ್ಜೆ ಹೊಂದಿದವರ ಪಟ್ಟಿ ಬಿಡುಗಡೆ ಮಾಡಲಿ: ಎನ್.ರವಿಕುಮಾರ್

ಮೆಟ್ರೋ ದರ ಇಳಿಸಿದ್ದು ನಾವು, ಕೇಂದ್ರ ಸರ್ಕಾರವಲ್ಲ ಎಂದ ಡಿಕೆಶಿ: ದರ ಏರಿಕೆ ಆಯ್ತು, ಈಗ ಇಳಿಕೆಗೆ ಕ್ರೆಡಿಟ್ ವಾರ್ ಶುರು

ಮೋದಿ ಪೋಸ್ಟರ್ ಹಾಕಿ ಅವಹೇಳನ: ಯೂತ್ ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ತೇಜಸ್ವಿ ಸೂರ್ಯ ವಶಕ್ಕೆ ಪಡೆದ ಪೊಲೀಸರು: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ಮುಂದಿನ ಸುದ್ದಿ
Show comments