ತಮಿಳುನಾಡಿನ ಹುಲಿ ಸೆರೆ ಕಾರ್ಯಚರಣೆಗೆ ಬಂಡೀಪುರದ ರಾಣಾ ನೆರವು

Webdunia
ಶನಿವಾರ, 9 ಅಕ್ಟೋಬರ್ 2021 (21:42 IST)
ಕರ್ನಾಟಕ ತಮಿಳುನಾಡು ಗಡಿ ಭಾಗದ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದೆ. ಇದರಿಂದಾಗಿ ನಾಲ್ಕು ಮಂದಿ ಹುಲಿ ದಾಳಿಗೆ ಬಲಿಯಾಗಿದ್ದಾರೆ. ತಮಿಳುನಾಡಿನ  ಅಡಲೂರು ಅರಣ್ಯ ವಲಯದ ಮುದುಮಲೈಗೆ ಬಂಡೀಪುರದ ಪತ್ತೆದಾರಿ ನಿಪುಣ ಎಂದೇ ಖ್ಯಾತಿಗಳಿಸಿರುವ ರಾಣಾ ಶ್ವಾನವೀಗ ನರಭಕ್ಷಕ ಹುಲಿ ಸೆರೆ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಲಿದೆ.ಬಂಡೀಪುರ ವನ್ಯಜೀವಿ ವಲಯಕ್ಕೆ ಹೊಂದಿಕೊಂಡಂತಿರುವ ತಮಿಳುನಾಡಿನ  ಗೂಡಲೂರು ಅರಣ್ಯ ವ್ಯಾಪ್ತಿಯಲ್ಲಿ ಜನಜಾನುವಾರು ಮೇಲೆ ದಾಳಿ ನಡೆಸಿ ನಾಲ್ಕು ಮಂದಿಯ ಸಾವಿಗೆ ಕಾರಣವಾಗಿದ್ದ ನರಭಕ್ಷಕ ಹುಲಿಯ ಸೆರೆ ಕಾರ್ಯಾಚರಣೆಗೆ ಬಂಡೀಪುರ ವನ್ಯಜೀವಿ ವಲಯದ ಪತ್ತೇದಾರಿ ನಿಪುಣ ರಾಣಾ ಹೆಸರಿನ ಜರ್ಮನ್ ಶಪರ್ಡ್ ಶ್ವಾನವೀಗ ತಮಿಳುನಾಡಿಗೆ ತೆರಳಿದೆ. ತಮಿಳುನಾಡಿನ ನೀಲಗಿರಿಯ ದೇವನ್ ಎಸ್ಟೇಟ್ನಲ್ಲಿ ಬೀಡುಬಿಟ್ಟಿದ್ದ ಹುಲಿಯು ಈಗ ಮದುಮಲೈಯತ್ತ ಪಯಣ ಬೆಳೆಸಿದೆ. ಇದಕ್ಕೂ ಮುಂಚೆ ದೇವನ್ ಎಸ್ಟೇಟ್ನಲ್ಲಿ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಕೊಂದು ಹಾಕಿತ್ತು. ಇದಾದ ನಂತರ ಗೋಪಾಲಕ ಬಸವನ್ ಎಂಬಾತನ ಮೇಲೂ ದಾಳಿ ನಡೆಸಿ ಕೊಂದುಹಾಕಿತ್ತು ಹೀಗೆ ಸಾಲು ಸಾಲು ಜಾನುವಾರುಗಳ ಮಾರಣ ಹೋಮ ನಡೆಸುತ್ತಿರುವ ಹುಲಿಯು ನಾಲ್ಕು ಮಂದಿ ಮನುಷ್ಯರನ್ನು ಬಲಿ ಪಡೆದಿರುವ ಹಿನ್ನೆಲೆ ಹುಲಿಯನ್ನು ಸೆರೆಹಿಡಿಯದೆ ಕೊಂದು ಹಾಕಿ ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದಾರೆ. ಹುಲಿಯ ಕ್ರೌರ್ಯ ಮುಂದುವರಿದ ಬೆನ್ನಲ್ಲೇ ಬಂಡೀಪುರ ವನ್ಯಜೀವಿ ವಲಯದ ಪತ್ತೇದಾರಿಕೆಯಲ್ಲಿ ಎಂದೇ ಖ್ಯಾತಿಯಾದ  ನಿಪುಣ ರಾಣನ ಮೊರೆಹೋಗಿರುವ ತಮಿಳುನಾಡು ಅರಣ್ಯ ಇಲಾಖೆ ಅಧಿಕಾರಿಗಳು ಈಗಾಗಲೇ ರಾಣಾ ಶ್ವಾನವನ್ನು ಕಾರ್ಯಚರಣೆಗಿಳಿಸಿದ್ದು ತಮಿಳುನಾಡು ಅರಣ್ಯ ಇಲಾಖೆ ನಾಲ್ಕು ತಂಡಗಳು ಸೆರೆಕಾರ್ಯಚರಣೆಯಲ್ಲಿ ತೊಡಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments